Webdunia - Bharat's app for daily news and videos

Install App

ವಲಸೆ ಕಾರ್ಮಿಕರಿಗಾಗಿ ರೇಷನ್ ವಿತರಣೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತಂದ ಕೇಂದ್ರ ಸರ್ಕಾರ

Webdunia
ಶನಿವಾರ, 29 ಜೂನ್ 2019 (08:55 IST)
ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.




ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ  'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.


ಬಡ ಜನರು, ಕಾರ್ಮಿಕರು ಉದ್ಯೋಗ ಅಥವಾ ಇನ್ಯಾವುದೇ ಕಾರಣಕ್ಕೆ ದೇಶದ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋದಾಗ ಅವರಿಗೆ ಆಹಾರ ಧಾನ್ಯ ಪಡೆಯಲು ಸಾಧ್ಯವಾಗುವಂತೆ 'ಒನ್ ನೇಷನ್, ಒನ್ ರೇಷನ್ ಕಾರ್ಡ್' ರೂಪಿಸಲಾಗುತ್ತಿದೆ. ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ  ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.


ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು.  ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments