Webdunia - Bharat's app for daily news and videos

Install App

ಶ್ರೀಮಂತ ವರ್ಗಕ್ಕೆ ಸಬ್ಸಿಡಿ ದರದ ಅಡುಗೆ ಅನಿಲ ಪೂರೈಕೆ ನಿಲ್ಲಿಸೋಲ್ಲ: ಪ್ರಧಾನ್

Webdunia
ಬುಧವಾರ, 17 ಡಿಸೆಂಬರ್ 2014 (18:41 IST)
ಶ್ರೀಮಂತ ವರ್ಗಕ್ಕೆ ಸಬ್ಸಿಡಿ ದರದ ಅಡುಗೆ ಅನಿಲದ ಪೂರೈಕೆ ನಿಲ್ಲಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿಲ್ಲ ಎಂದು ತೈಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಪ್ರಸಕ್ತ ಎಲ್‌ಪಿಜಿ ಗ್ರಾಹಕರಿಗೆ ಸಬ್ಸಿಡಿಯನ್ನು ಸರೆಂಡರ್ ಮಾಡಿ ಮಾರುಕಟ್ಟೆ ದರದಲ್ಲಿ ಅಡುಗೆ ಅನಿಲ ಖರೀದಿಸುವಂತೆ ತೈಲ ಮಾರುಕಟ್ಟೆ ಕಂಪನಿಗಳು ಆಯ್ಕೆಯನ್ನು ನೀಡಿದೆ.

ಪ್ರಸ್ತುತ ಶ್ರೀಮಂತ ವರ್ಗಕ್ಕೆ ಸಬ್ಸಿಡಿ ನಿಲ್ಲಿಸುವ ಯಾವುದೇ ಪರಿಶೀಲನೆ ಇಲ್ಲ ಎಂದು ಅವರು ಹೇಳಿದ್ದಾರೆ. 15 ಕೋಟಿ ಎಲ್‌ಪಿಜಿ ಗ್ರಾಹಕರ ಪೈಕಿ 12, 471 ಜನರು ಮಾತ್ರ ಸ್ವಯಂಪ್ರೇರಿತರಾಗಿ ಸಬ್ಸಿಡಿಗಳನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಪ್ರಧಾನ್ ಲೋಕಸಭೆಗೆ ತಿಳಿಸಿದರು. 
 
ಸಚಿವಾಲಯವು ಸಚಿವರಿಗೆ, ಸಂಸದರಿಗೆ, ಶಾಸಕರಿಗೆ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸಬ್ಸಿಡಿಗಳನ್ನು ತ್ಯಜಿಸುವಂತೆ ಒತ್ತಾಯಿಸಿದೆ. ಗ್ರಾಹಕರು ಪ್ರಸಕ್ತ ವರ್ಷಕ್ಕೆ ಸಬ್ಸಿಡಿ ದರದಲ್ಲಿ 12 ಸಿಲಿಂಡರ್‌ಗಳನ್ನು ಪಡೆಯುವ ಅರ್ಹತೆ ಹೊಂದಿದ್ದಾರೆ. ಅದಕ್ಕಿಂತ ಹೆಚ್ಚು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾಗುತ್ತದೆ. ಸಬ್ಸಿಡಿ ದರದ 14.2 ಕೆಜಿ ಸಿಲಿಂಡರ್ ದೆಹಲಿಯಲ್ಲಿ 417 ರೂ.ಗೆ ಲಭ್ಯವಾಗುತ್ತದೆ. ಸಬ್ಸಿಡಿ ಕೋಟಾಕ್ಕಿಂತ ಹೆಚ್ಚಿನ ಸಿಲಿಂಡರ್‌ಗಳನ್ನು ಮಾರುಕಟ್ಟೆ ದರದಲ್ಲಿ 752 ರೂ. ಕೊಟ್ಟು ಖರೀದಿಸಬೇಕಾಗುತ್ತದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments