Webdunia - Bharat's app for daily news and videos

Install App

ಕುಸಿತದ ನಂತರ ಚೇತರಿಕೆ ಕಂಡ ಷೇರುಪೇಟೆ

Webdunia
ಮಂಗಳವಾರ, 23 ಆಗಸ್ಟ್ 2022 (19:50 IST)
ಉಕ್ರೇನ್​ ಮೇಲೆ ರಷ್ಯಾದ ದಾಳಿ ಮತ್ತಷ್ಟು ತೀವ್ರಗೊಳ್ಳುವ ಭೀತಿ, ತೈವಾನ್ ವಿವಾದ ಪಡೆದುಕೊಳ್ಳಬಹುದಾದ ತಿರುವಿನ ಬಗ್ಗೆ ಅಸ್ಪಷ್ಟತೆ, ಯೂರೋಪ್​ನಲ್ಲಿನ ಇಂಧನ ಬಿಕ್ಕಟ್ಟು, ತೈಲೋತ್ಪಾದನೆ ಕಡಿಮೆ ಮಾಡುವುದಾಗಿ ಒಪೆಕ್ ದೇಶಗಳ ಘೋಷಣೆ ಸೇರಿದಂತೆ ಹಲವು ಕಾರಣಗಳಿಂದ ಭಾರತದ ಷೇರುಪೇಟೆಯಲ್ಲಿ ನಿರುತ್ಸಾಹ ಮೂಡಿದೆ. ಇಂದು ಷೇರುಪೇಟೆಯು ಕುಸಿತದೊಂದಿಗೆ ವಹಿವಾಟು ಅರಂಭಿಸಿತು. ಇದು BSE ಮತ್ತು NSE ಸತತ 3ನೇ ದಿನವೂ ಕುಸಿತವಾಗಿದೆ. ಚೀನಾದಲ್ಲಿ ಆರ್ಥಿಕ ಹಿಂಜರಿತದ ಭೀತಿ ಎದುರಾಗಿದ್ದರೆ, ಏಷ್ಯಾದ ಆರು ಪ್ರಮುಖ ಷೇರುಪೇಟೆಗಳಲ್ಲಿ ಸತತ ಆರನೇ ದಿನ ಕುಸಿತ ಮುಂದುವರಿದಿದೆ. ಭಾರತದಲ್ಲಿ ಕುಸಿತದೊಂದಿಗೆ ವಹಿವಾಟು ಆರಂಭವಾದರೂ, ಸ್ವಲ್ಪ ಕಾಲದಲ್ಲಿಯೇ ಎರಡೂ ಸೂಚ್ಯಂಕಗಳು ಚೇತರಿಸಿಕೊಂಡವು. ಆರಂಭಿಕ ವಹಿವಾಟಿನಲ್ಲಿ ಬಿಎಸ್​ಐ ಸೆನ್ಸೆಕ್ಸ್ 361.86 ಅಂಶಗಳ ಕುಸಿತ ಕಂಡರೆ, ಎನ್​ಎಸ್​ಇ 114.70 ಅಂಶಗಳ ಕುಸಿತ ದಾಖಲಿಸಿತ್ತು. ನಿನ್ನೆ ವಹಿವಾಟು ಕೊನೆಗೊಂಡಿದ್ದಕ್ಕೆ ಹೋಲಿಸಿದರೆ ಬಿಎಸ್​ಇ  ಮುನ್ನಡೆ ದಾಖಲಿಸಿದವು. ಸೆನ್ಸೆಕ್ಸ್ ಮತ್ತೆ 60,000 ಅಂಶಗಳ ಸಮೀಪಕ್ಕೆ ಮುನ್ನುಗ್ಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments