Webdunia - Bharat's app for daily news and videos

Install App

ಪ್ರತಿಭಟನೆಗೆ ಮಣಿದ ಕೇಂದ್ರ ಸರಕಾರ: ಭವಿಷ್ಯ ನಿಧಿ ಬಡ್ಡಿ ದರ ಹೆಚ್ಚಳ

Webdunia
ಶುಕ್ರವಾರ, 29 ಏಪ್ರಿಲ್ 2016 (20:30 IST)
ಕಾರ್ಮಿಕ ಸಂಘಟನೆಗಳ ತೀವ್ರ ಪ್ರತಿಭಟನೆಗೆ ಬೆದರಿದ ಕೇಂದ್ರ ಸರಕಾರ, ನೌಕರರ ಭವಿಷ್ಯ ನಿಧಿ ಠೇವಣಿಯ ಮೇಲೆ 8.8 ಪ್ರತಿಶತ ಬಡ್ಡಿದರವನ್ನು ನೀಡಲು ಸಮ್ಮತಿ ಸೂಚಿಸಿದೆ. 
ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳಿಗೆ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ನಿಗದಿಗೊಳಿಸಿದ್ದ 8.8 ಪ್ರತಿಶತ ಬಡ್ಡಿ ದರದ ಬದಲು 8.7 ಪ್ರತಿಶತ ದರ ನಿಗದಿ ಪಡಿಸಿರುವ ಹಣಕಾಸು ಸಚಿವಾಲಯದ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ದೇಶವ್ಯಾಪ್ತಿ ಮುಷ್ಕರ ಕೈಗೊಂಡಿದ್ದವು.
 
ನೌಕರರ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿದರ ಕಡಿತಗೊಳಿಸಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ತೀವ್ರ ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಬಂಡಾರೂ ದತ್ತಾತ್ರೇಯ ಮಂಗಳವಾರ ವಿತ್ತ ಸಚಿವ ಅರುಣ ಜೇಟ್ಲಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
 
ಶೀಘ್ರದಲ್ಲಿ ನಮ್ಮ ಸಚಿವಾಲಯ ನೌಕರರ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿದರ ಕುರಿತು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮುಂದಿನ ತಿರ್ಮಾಣಗಳನ್ನು ಕೈಗೊಳ್ಳುತ್ತೇವೆ ಎಂದು ಬಂಡಾರೂ ದತ್ತಾತ್ರೇಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಪ್ರಸಕ್ತ ವರ್ಷದ ಫೆಬ್ರುವರಿಯಲ್ಲಿ ನಡೆದ ಸಭೆಯಲ್ಲಿ ನೌಕರರ ಭವಿಷ್ಯ ನಿಧಿ ಠೇವಣಿಯ ಮೇಲೆ 8.8 ಪ್ರತಿಶತ ಬಡ್ಡಿದರ ನಿಗದಿ ಮಾಡುವಂತೆ ಪ್ರಸ್ತಾವನೆ ನೀಡಿತ್ತು.
 
ದೇಶದ ಆರ್ಥಿಕತೆ ಮತ್ತು ಕೇಂದ್ರದ 7 ನೇ ವೇತನ ಆಯೋಗವನ್ನು ಗಮಣದಲ್ಲಿಟ್ಟುಕೊಂಡು ನೌಕರರ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿದರವನ್ನು ನಿರ್ಧರಿಸಲಾಗಿತ್ತು ಎಂದು ದತ್ತಾತ್ರೇಯ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ರಾಹುಲ್ ಗಾಂಧಿ ಆಮೇಲೆ, ಮೊದಲು ಇವರನ್ನು ಮೀಟ್ ಮಾಡಲಿರುವ ಸಿಎಂ, ಡಿಸಿಎಂ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಮುಂದಿನ ಸುದ್ದಿ
Show comments