Webdunia - Bharat's app for daily news and videos

Install App

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆಗೆ ಮಣಿದ ಉಬೇರ್

Webdunia
ಮಂಗಳವಾರ, 19 ಏಪ್ರಿಲ್ 2016 (14:39 IST)
ಕ್ಯಾಬ್ ಸೇವೆ ನೀಡುತ್ತಿರುವ ಸಂಸ್ಥೆಗಳು ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿರುವ ಖಡಕ್ ಎಚ್ಚರಿಕೆ ಹಿನ್ನೆಲೆಯಲ್ಲಿ, ಆನ್‌ಲೈನ್ ಕ್ಯಾಬ್ ಸೇವೆ ನೀಡುತ್ತಿರುವ ಉಬೇರ್ ಸಂಸ್ಥೆ ಪ್ರಯಾಣದ ಬೆಲೆಯನ್ನು ಕಡಿತಗೊಳಿಸಿದೆ.
ನಮ್ಮ ಜೀವನಾಧಾರ ಪಾಲುದಾರರು ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ, ಸಂಸ್ಥೆ ತಕ್ಷಣವೇ ಪ್ರಸ್ತುತ ವೆಚ್ಚವನ್ನು ಕಡಿತಗೊಳಿಸಿದೆ ಎಂದು ಉಬೇರ್ ಸಂಸ್ಥೆ ಟ್ವೀಟ್ ಮಾಡಿದೆ.
 
ಎರಡನೆಯ ಹಂತದ ಸಮ-ಬೆಸ ಸಂಚಾರ ಪ್ರಯೋಗ ಏಪ್ರಿಲ್ 30 ರಂದು ಮುಗಿಯಲಿದ್ದು, ನಂತರ ಬೆಲೆ ಏರಿಕೆ ಮಾಡುವ ಕುರಿತು ಉಬೇರ್ ಸಂಸ್ಥೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
 
ಉಬೇರ್ ಸಂಸ್ಥೆ, ದೆಹಲಿ ಸರಕಾರ ಮತ್ತು ದೆಹಲಿ ಜನತೆಗೊಸ್ಕರ ಕಾರ್ಯನಿರ್ವಹಿಸಲು ಸಿದ್ಧವಿದೆ ಎಂದು ತಿಳಿಸಿದೆ.
 
ಎರಡನೆಯ ಹಂತದ ಸಮ-ಬೆಸ ಸಂಚಾರ ಪ್ರಯೋಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸದಂತೆ ದೆಹಲಿ ಸರಕಾರ ಆನ್‌ಲೈನ್ ಕ್ಯಾಬ್ ಸೇವೆ ನೀಡುತ್ತಿರುವ ಸಂಸ್ಥೆಗಳಿಗೆ ಕಠಿಣ ಸೂಚನೆಯನ್ನು ನೀಡಿತ್ತು. 
 
ಎರಡನೆಯ ಹಂತದ ಸಮ-ಬೆಸ ಸಂಚಾರ ಪ್ರಯೋಗ ನಡಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಕ್ಯಾಬೆ ಸೇವೆ ನೀಡುತ್ತಿರುವ ಸಂಸ್ಥೆಗಳಿಗೆ ಹೆಚ್ಚು ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣದ ದರವನ್ನು ಏರಿಕೆ ಮಾಡಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Show comments