Webdunia - Bharat's app for daily news and videos

Install App

ಜೈಲಿಗೆ ತೆರಳುವ ಮುಂಚೆಯೇ ವಿದೇಶಕ್ಕೆ ಎಸ್ಕೇಪ್ ಆಗಲು ಬಯಸಿದ್ದ ಸುಬ್ರತಾ ರಾಯ್

Webdunia
ಸೋಮವಾರ, 11 ಏಪ್ರಿಲ್ 2016 (19:40 IST)
ಹೈಪ್ರೋಫೈಲ್ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜೈಲಿಗೆ ಕಳುಹಿಸುವ ಒಂದು ವಾರದ ಮುಂಚೆ ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ವಿದೇಶಕ್ಕೆ ತೆರಳಿ ಬಿಲ್ ಕ್ಲಿಂಟನ್ ಮತ್ತು ಟೋನಿ ಬ್ಲೇರ್ ಅವರ ಜೊತೆ ವ್ಯವಹಾರಿಕ ಚರ್ಚೆ ನಡೆಸಲು ಯೋಜನೆ ರೂಪಿಸಿದ್ದರು ಎಂದು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಪರ ವಕೀಲರಾದ ಅರವಿಂದ್ ದತಾರ್ ತಿಳಿಸಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಹಾರಾ ಮತ್ತು ಸೆಬಿಯ ಮಧ್ಯೆ ನಡೆಯುತ್ತಿರುವ ದೀರ್ಘಕಾಲದ ಕಾನೂನು ಸಮರದ ಕುರಿತಂತೆ ನ್ಯಾಯಾಲಯದ ಮುಂದೆ ವರ್ಣಿಸಿದ ದಾತಾರ್, ಇದೀಗ ಆರಂಭವಾಗಿದೆ. ಅಂತ್ಯ ನಮ್ಮನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತದೆಯೋ ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. 
 
ಸಹರಾ ಸಂಸ್ಥೆ, 3 ಕೋಟಿ ಶೇರುದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಸುಬ್ರಾತ್ ರಾಯ್ ಅವರನ್ನು ಬಂಧಿಸಿ, 4 ಮಾರ್ಚ್ 2014 ರಂದು, ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು. 
 
ಮುಂಬೈ ಆಸ್ತಿಗೆ ಸಂಬಂಧಿಸಿದ ಪ್ರಕರಣ ಕುರಿತು ನಡೆಯುತ್ತಿದ್ದ ವಿಚಾರಣೆ ಕುರಿತಂತೆ ವಾದ ಮಂಡಿಸಿದ ಅವರು, ಮುಂಬೈ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯ್ ದೇಶ ಬಿಟ್ಟು ತೆರಳದಂತೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಕೋರುವ ಮುನ್ನವೇ ಸುಬ್ರತಾ ರಾಯ್, ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿ, ವಹಿವಾಟಿನ ವಿಷಯ ಕುರಿತು ಬಿಲ್ ಕ್ಲಿಂಟನ್ ಮತ್ತು ಟೋನ್ ಅವರೊಂದಿಗೆ ಚರ್ಚಿಸಲು ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿದ್ದರು. ಆದರೆ, ಸುಪ್ರೀಂಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments