Webdunia - Bharat's app for daily news and videos

Install App

ಷೇರು ಮಾರುಕಟ್ಟೆ ಕಳೆದ ಒಂದು ವಾರದಿಂದ ಕುಸಿಯುತ್ತಿರುವುದಕ್ಕೆ ಕಾರಣವೇನು

Krishnaveni K
ಮಂಗಳವಾರ, 14 ಜನವರಿ 2025 (09:39 IST)
ಮುಂಬೈ: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿಕೊಂಡಿರುವವರು ಈಗ ತಲೆಮೇಲೆ ಕೈ ಹೊತ್ತು ಕೂತಿದ್ದಾರೆ. ಕಳೆದ ಒಂದು ವಾರದಿಂದ ಷೇರು ಮಾರುಕಟ್ಟೆ ಪಾತಾಳ ತಲುಪಿರುವುದಕ್ಕೆ ಕಾರಣವೇನು?

ನಿನ್ನೆ ಷೇರುಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 657.97 ಪಾಯಿಂಟ್ ಗಳಷ್ಟು ಕುಸಿತವಾಗಿದ್ದರೆ ಎನ್ಎಸ್ ಇ ನಿಫ್ಟಿ 199.60 ಪಾಯಿಂಟ್ ಗಳಷ್ಟು ಕುಸಿತವಾಗಿತ್ತು. ಇದು ಬೆಳಗಿನ ಅವಧಿಯಲ್ಲಿ. ಈ ಟ್ರೆಂಡ್ ನಂತರವೂ ಮುಂದುವರಿದಿದೆ.

ನಿನ್ನೆ ಮಾರುಕಟ್ಟೆ ಕ್ಲೋಸ್ ಆಗುವವರೆಗೂ ಇದೇ ಟ್ರೆಂಡ್ ಮುಂದುವರಿದಿತ್ತು. ಅದರಲ್ಲೂ ಭಾರತೀಯ ರೂಪಾಯಿ ಅಮೆರಿಕಾದ ಡಾಲರ್ ಎದುರು 86.27 ರಷ್ಟು ದಾಖಲೆಯ ಕುಸಿತ ಕಂಡಿತ್ತು. ವರ್ಷಾಂತ್ಯದಲ್ಲಿ ಷೇರು ಮಾರುಕಟ್ಟೆಯಲ್ಲಿನ ಕುಸಿತದ ಟ್ರೆಂಡ್ ಹೊಸ ವರ್ಷದಲ್ಲೂ ಮುಂದುವರಿದಿದೆ.

ಇದು ಷೇರುದಾರರನ್ನು ಚಿಂತೆಗೀಡು ಮಾಡಿದೆ. ಕಳೆದ ಒಂದು ವಾರದಲ್ಲಿ ದಾಖಲೆಯ ಕುಸಿತ ಕಂಡುಬರುತ್ತಿರುವುದು ಹೂಡಿಕೆ ಮಾಡಿದವರಿಗೆ ದೊಡ್ಡ ನಷ್ಟವುಂಟು ಮಾಡುತ್ತಿದೆ. ಇದಕ್ಕೆ ಹಲವು ಕಾರಣಗಳನ್ನು ತಜ್ಞರು ನೀಡುತ್ತಿದ್ದಾರೆ.

ಕಳೆದ ಒಂದು ವಾರದಲ್ಲಿ ವಿಶ್ವದಾದ್ಯಂತ ಎಚ್ಎಂಪಿವಿ ವೈರಸ್ ವಿಚಾರ ದೊಡ್ಡ ಸುದ್ದಿಯಾಗಿತ್ತು. ಬಹುಶಃ ಈ ಕಾರಣಕ್ಕೂ ಷೇರುಮಾರುಕಟ್ಟೆ ಕುಸಿತ ಕಂಡಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಇದರ ಹೊರತಾಗಿ ಲಾಸ್ ಏಂಜಲೀಸ್ ನಲ್ಲಿ ನಡೆದ ಅಗ್ನಿ ಅನಾಹುತವೂ ಸಾಕಷ್ಟು ನಷ್ಟಕ್ಕೆ ಕಾರಣವಾಗಿತ್ತು. ಇದೂ ಷೇರು ಮಾರುಕಟ್ಟೆ ಕುಸಿತ ಕಾಣಲು ಒಂದು ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದಲ್ಲದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ಹೊಡೆತ ನೀಡಿದೆ. ಹಾಗಿದ್ದರೂ ಮುಂದಿನ ದಿನಗಳಲ್ಲಿ ಐಟಿ ವಲಯ, ಆರೋಗ್ಯ ವಲಯದ ಷೇರುಗಳಲ್ಲಿ ಕೊಂಚ ಚೇತರಿಕೆ ಕಂಡುಬರಬಹುದು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸುತ್ತಾರೆ. ಆದರೆ ಭಾರತೀಯ ಮಾರುಕಟ್ಟೆಗೆ ಕಳೆದ ಒಂದು ವಾರದಿಂದ ಈ ಮಟ್ಟಿಗೆ ನೇರ ಹೊಡೆತ ಬೀಳುವುದಕ್ಕೆ ನಿಖರವಾಗಿ ಇಂತಹದ್ದೇ ಕಾರಣ ಎಂದು ತಿಳಿಯದೇ ಹೂಡಿಕೆದಾರರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments