Webdunia - Bharat's app for daily news and videos

Install App

ಸೋಲಾರ್ ಎನರ್ಜಿ: ಭಾರತಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡಲಿರುವ ವಿಶ್ವಬ್ಯಾಂಕ್

Webdunia
ಶುಕ್ರವಾರ, 1 ಜುಲೈ 2016 (19:03 IST)
2022 ರ ವೇಳೆಗೆ  1 ಲಕ್ಷ ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಯೋಜನೆಗೆ ವಿಶ್ವ ಬ್ಯಾಂಕ್ ಭಾರತಕ್ಕೆ 1 ಬಿಲಿಯನ್ ಡಾಲರ್ ಸಾಲವನ್ನು ನೀಡಲು ಮುಂದಾಗಿದೆ. ವಿಶ್ವಬ್ಯಾಂಕ್ ಮೊದಲ ಬಾರಿಗೆ ಗರಿಷ್ಠ ಮೊತ್ತದ ಸಾಲವನ್ನು ಸೋಲಾರ್ ಯೋಜನೆಗೆ ನೀಡಿದೆ. 
 
ಈ ಯೋಜನೆಗಳು ಸೌರ ಮೇಲ್ಛಾವಣಿಯ ತಂತ್ರಜ್ಞಾನ, ಸೌರ ಉದ್ಯಾನವನಗಳ ಮೂಲಭೂತ ಸೌಕರ್ಯ, ಮಾರುಕಟ್ಟೆಗೆ ನಾವಿನ್ಯ ಸೌರಶಕ್ತಿ ಮತ್ತು ಹೈಬ್ರಿಡ್ ತಂತ್ರಜ್ಞಾನದ ಬಿಡುಗಡೆ ಮತ್ತು ಸೌರ ಭರಿತ ರಾಜ್ಯಗಳ ಟ್ರಾನ್ಸ್‌ಮಿಷನ್ ಲೈನ್‌ಗಳನ್ನು ಒಳಗೊಂಡಿದೆ.
 
ಭಾರತ ಸರಕಾರ ರೂಪಿಸಿರುವ ಯೋಜನೆಗೆ 1 ಬಿಲಿಯನ್ ಡಾಲರ್ ಹಣ ನೀಡಲು ನಿರ್ಧರಿಸಿದ್ದು, 625 ಮಿಲಿಯನ್ ಡಾಲರ್‌ಗಳಲ್ಲಿ ಸೌರ ಮೇಲ್ಛಾವಣಿಯ ತಂತ್ರಜ್ಞಾನ ಯೋಜನೆಗಾಗಿ ಭಾರತ ಸರಕಾರದ ಜೊತೆ ಮಾಡಿಕೊಂಡ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಈ ಯೋಜನೆಯಲ್ಲಿ 40 ಮೆಗಾವ್ಯಾಟ್ ವಿದ್ಯುತ್ ಸ್ಥಾವರಕ್ಕಾಗಿ ಹಣಕಾಸು ನೆರವು ನೀಡಲಾಗುವುದು ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ಎಂದು ತಿಳಿಸಿದ್ದಾರೆ. 
 
ಸೋಲಾರ್ ಯೋಜನೆಗಾಗಿ ವಿಶ್ವಬ್ಯಾಂಕ್‌ನಿಂದ ಭಾರತ ಪಡೆದಷ್ಟು ಸಾಲವನ್ನು ವಿಶ್ವದ ಯಾವುದೇ ದೇಶ ಪಡೆದಿಲ್ಲ ಎಂದು ಮೂಲಗಳು ತಿಳಿಸಿವೆ.  
 
ಸೋಲಾರ್ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಬದ್ಧತೆಗೆ ನಾವು ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಪ್ಯಾರಿಸ್‌ನಲ್ಲಿ ನಡೆದ ಕೋಪ್ 21 ಶೃಂಗಸಭೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಹವಾಮಾನ ಬದಲಾವಣೆ ಜಾಗತಿಕ ಪ್ರಯತ್ನಗಳಿಗೆ ಭಾರತ ಬೆಂಬಲ ಸೂಚಿಸಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ 
 
ಭಾರತ ಸೇರಿದಂತೆ 121 ದೇಶಗಳ ಇಂಟರ್ನ್ಯಾಷನಲ್ ಸೋಲಾರ್ ಅಲೈಯನ್ಸ್ ಒಪ್ಪಂದಗಳಿಗೆ ವಿಶ್ವ ಬ್ಯಾಂಕ್ ಸಹಿ ಹಾಕಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments