Webdunia - Bharat's app for daily news and videos

Install App

ಎತ್ತಿನಹೊಳೆ ಯೋಜನೆ: ಭೂಮಿ ದರ ನಿಗದಿ

Webdunia
ಶನಿವಾರ, 28 ಜನವರಿ 2017 (15:18 IST)
ರಾಜ್ಯದ 7 ಜಿಲ್ಲೆಗಳ ಬಯಲು ಸೀಮೆ ಪ್ರದೇಶಗಳಿಗೆ ನೀರು ಪೂರೈಸುವ ಉದ್ದೇಶದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಎತ್ತಿನಹೊಳೆ ಯೋಜನೆಗೆ ಅಗತ್ಯವಿರುವ ಸುಮಾರು 600 ಎಕರೆ ಭೂಮಿಯನ್ನು ಖರೀದಿಸಲು ದರ ನಿರ್ಧರಣೆಗೆ ಅಗತ್ಯವಿರುವ ಪೂರ್ವ ತಯಾರಿಗಾಗಿ ಜಿಲ್ಲಾಧಿಕಾರಿ ವಿ. ಚೈತ್ರ ಅವರ ಅಧ್ಯಕ್ಷತೆಯಲ್ಲಿಂದು ಸಭೆ ನಡೆಯಿತು.
 
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಈವರೆಗೆ ಆಗಿರುವ ಪ್ರಗತಿಯ ಬಗ್ಗೆ ಭೂಸ್ವಾಧೀನ ಅಧಿಕಾರಿ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. 
 
ಯೋಜನೆಗೆ ಅಗತ್ಯವಿರುವ ನಿರ್ಧಿಷ್ಟ ಜಮೀನಿನ ಪ್ರಮಾಣದ ಬಗ್ಗೆ ಪದೇ ಪದೇ ವ್ಯತ್ಯಾಸಗಳಾಗಬಾರದು. ಈ ಬಗ್ಗೆ ಅಂತಿಮಪಡಿಸಿ ಜನವರಿ 27ರೊಳಗೆ ವರದಿ ಸಲ್ಲಿಸಿದ ನಂತರವಷ್ಟೇ ದರ ನಿರ್ಧರಣೆಯ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ವಿ.ಚೈತ್ರ ಅವರು ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
 
100 ಎಕರೆ ಮೇಲಿನ ಜಮೀನು ಖರೀದಿಗೆ ಇರುವ ನಿರ್ಭಂದಗಳನ್ನು ಸರ್ಕಾರ ಸಡಿಲಿಸಿ ಹಂತ ಹಂತದ ಖರೀದಿಗೆ ಒಪ್ಪಿಗೆ ನೀಡಿದೆ. ಆದರೆ ಖರೀದಿಯ ಮೌಲ್ಯವು ವಿಶೇಷ ಭೂಸ್ವಾಧೀನ ಪ್ರಕ್ರಿಯೆಯ ದರ ನಿಗಧಿ ಮಾನದಂಡ ಮಿತಿಯೊಳಗಿರಬೇಕೆಂದು ನಿರ್ದೇಶನ ನೀಡಲಾಗಿದೆ.
 
ಭೂ ಕೋರಿಕೆ ಇಲಾಖೆ ಖರೀದಿ ಉದ್ದೇಶ, ವಿಸ್ತೀರ್ಣ, ಆರ್.ಟಿ.ಸಿ. ನಕ್ಷೆ ಮತ್ತು ಒಪ್ಪಿಗೆ ಪತ್ರವನ್ನು ಪಡೆಯಬೇಕು ಎಂದ ಅವರು ಯೋಜನೆಯ ಸಾಮಾಜಿಕ ಪರಿಣಾಮಗಳ ನಿರ್ಧರಣೆಗೆ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಕೆಗೆ ಇನ್ನಷ್ಟು ಕಾಲಾವಕಾಶವನ್ನು ಕೋರಿದ್ದು ಅದರ ಬಗೆಗಿನ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಆದೇಶ ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments