Webdunia - Bharat's app for daily news and videos

Install App

ಝೆನ್‌ ಮೊಬೈಲ್‌ನಿಂದ ಅತ್ಯಾಧುನಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ

Webdunia
ಬುಧವಾರ, 14 ಸೆಪ್ಟಂಬರ್ 2016 (12:56 IST)
ಸ್ವದೇಶಿ ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಝೆನ್ ಮೊಬೈಲ್, ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಹೊಚ್ಚ ಹೊಸ 'ಅಡ್ಮಿರ್ ಸ್ಟಾರ್' ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಹೊಸ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 3,290 ರೂಪಾಯಿ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿವೆ. 
'ಅಡ್ಮಿರ್ ಸ್ಟಾರ್' ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 4.5 ಇಂಚಿನ ಎಫ್‌ಡಬ್ಲ್ಯೂವಿಜಿಎ ಡಿಸ್‌ಪ್ಲೇ, 512 ಎಮ್‌ಬಿ ರ್ಯಾಮ್ ಜೊತೆ 1.3 ಜಿಎಚ್‌ಝಡ್ ಕ್ವಾಡ್ ಕೋರ್ ಪ್ರೊಸೆಸರ್ ಹಾಗೂ ಆಂಡ್ರಾಯ್ಡ್ 6.0 ಮಾರ್ಷ್ಮ್ಯಾಲೋ ಆಪರೇಟಿಂಗ್ ಸಿಸ್ಟಮ್ ವಿಶೇಷತೆಯನ್ನು ಒಳಗೊಂಡಿದೆ. 
 
ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿರುವ ಹೊಸ ವೈಶಿಷ್ಟ್ಯದ 'ಅಡ್ಮಿರ್ ಸ್ಟಾರ್' ಸ್ಮಾರ್ಟ್‌ಪೋನ್‌ಗಳು ಮಾರುಕಟ್ಟೆಯಲ್ಲಿ ಪ್ರಬಲ ಪೈಪೋಟಿ ನೀಡುವ ನಂಬಿಕೆ ಇಂದೆ ಎಂದು ಝನ್ ಮೊಬೈಲ್ ಸಿಇಓ ಸಂಜಯ್ ಕಲಿರೊನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಈ ಸ್ಮಾರ್ಟ್‌ಪೋನ್‌ಗಳು ಎಸ್‌ಓಎಸ್ ವೈಶಿಷ್ಟ್ಯವನ್ನು ಒಳಗೊಂಡಿದ್ದು, ಈ ವಿಶೇಷತೆಯ ಸಹಾಯದಿಂದ ಬಳಕೆದಾರರು ತುರ್ತು ಸಮಯದಲ್ಲಿ ಐದು ಪೂರ್ವ ನಿರ್ಧಾರಿತ ಸಂಖ್ಯೆಗಳಿಗೆ ತಮ್ಮ ಸ್ಥಳದ ವಿವರಗಳನ್ನು ಸೆಂಡ್ ಮಾಡಲು ಅನುಮತಿಸುತ್ತದೆ.
 
'ಅಡ್ಮಿರ್ ಸ್ಟಾರ್' ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 5 ಎಂಪಿ ರಿಯರ್ ಕ್ಯಾಮೆರಾ ಹಾಗೂ 1.3 ಫ್ರಂಟ್ ಕ್ಯಾಮೆರಾ ಹೊಂದಿದ್ದು, 8 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯದ ಜೊತೆಗೆ 32 ಜಿಬಿ ವಿಸ್ತರಣೆಯ ಸ್ಟೋರೇಜ್ ಸಾಮರ್ಥ್ಯ ಹಾಗೂ 2000ಎಮ್‌ಎಚ್‌ಝಡ್ ಬ್ಯಾಟರಿ ವಿಶೇಷತೆ ಹೊಂದಿದೆ.
 
ಈ ಸ್ಮಾರ್ಟ್‌ಪೋನ್‌ಗಳು ಝೆನ್ ಅಪ್ಲಿಕೇಶನ್ ಕ್ಲೌಡ್ ಮತ್ತು ಅಪ್ಲಿಕೇಶನ್ ಸೇರಿದಂತೆ ಲೈವ್ ಟಿವಿ ಸ್ಟ್ರೀಮಿಂಗ್ ಅಪ್ಲಿಕೇಶನ್ ನೆಕ್ಸ್ಜಿಟಿವಿ, ವೀಡಿಯೊ ಪ್ಲೇಯರ್ ವೊಲಿವ್ ಮತ್ತು ಸಾವನ್ ಆಪ್‌ನೊಂದಿಗೆ ಗ್ರಾಹಕರಿಗೆ ಲಭ್ಯವಾಗಲಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments