Webdunia - Bharat's app for daily news and videos

Install App

ಜೆಟಿಇ ಸಂಸ್ಥೆಯಿಂದ ಅತ್ಯಾಧುನಿಕ ನುಬಿಯಾ ಝಡ್-11 ಸ್ಮಾರ್ಟ್‌ಪೋನ್ ಮಾರುಕಟ್ಟೆಗೆ

Webdunia
ಬುಧವಾರ, 29 ಜೂನ್ 2016 (13:48 IST)
ಚೀನಾ ಮೂಲದ ಹ್ಯಾಂಡ್‌ಸೆಟ್ ತಯಾರಕರಾಗಿರುವ ಜೆಟಿಇ ಸಂಸ್ಥೆ, ಹೊಸ ವೈಶಿಷ್ಟ್ಯದ ಅತ್ಯಾಧುನಿಕ ನುಬಿಯಾ ಝಡ್-11 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಅನಾವರಣಗೊಳಿಸಿದೆ. ಈ ಹೊಸ ವೈಶಿಷ್ಟ್ಯದ ಪೋನ್‌ಗಳು ಜುಲೈ 6 ರಂದು ಚೀನಾ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ. 

















ನುಬಿಯಾ ಝಡ್-11 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಎರಡು ವೈವಿಧ್ಯದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. 4 ಜಿಬಿ ರ್ಯಾಮ್ ಮತ್ತು 64 ಜಿಬಿ ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಆವೃತ್ತಿಯ ಪೋನ್‌ಗಳು ಗ್ರಾಹಕರಿಗೆ 25 ಸಾವಿರ ರೂಪಾಯಿಗಳಲ್ಲಿ ಲಭ್ಯವಿದ್ದು, 6 ಜಿಬಿ ರ್ಯಾಮ್ 128 ಜಿಬಿ ಸ್ಟೋರೇಜ್ ಸಾಮರ್ಥ್ಯ ಹೊಂದಿರುವ ಆವೃತ್ತಿಯ ಪೋನ್‌ಗಳು 35 ಸಾವಿರ ರೂಪಾಯಿಗಳಲ್ಲಿ ಲಭ್ಯವಾಗಲಿದೆ. 
 
ಜೆಟಿಇ ಸಂಸ್ಥೆಯ ನುಬಿಯಾ ಝಡ್-11 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 5.5 ಫುಲ್ ಎಚ್‌ಡಿ (1080x1920 ಪಿಕ್ಸೆಲ್) ಡಿಸ್‌ಪ್ಲೇ ಮತ್ತು ಗೀರುಗಳಿಂದ ರಕ್ಷಣೆ ನೀಡಲು ಅತ್ಯಾಧುನಿಕ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್-3 ವೈಶಿಷ್ಟ್ಯವನ್ನು ಹೊಂದಿದೆ. ಈ ಪೋನ್‌ಗಳು ನುಬಿಯಾ ಯುಐ 4.0 ಆಧಾರಿತ ಆಂಡ್ರಾಯ್ಡ್ 6.0 ಮಾರ್ಷ್ಮ್ಯಾಲೋ ವೈಶಿಷ್ಟ್ಯವನ್ನು ಹೊಂದಿದೆ.
 
ಈ ಪೋನ್‌ಗಳು ಒಂದು ಮೈಕ್ರೋ ಸಿಮ್ ಮತ್ತೊಂದು ನ್ಯಾನೋ ಸಿಮ್‌ಗೆ ಸ್ಪಂದಿಸುವ ಹೈಬ್ರಿಡ್ ಡ್ಯುಯಲ್ ಸಿಮ್ ವೈಶಿಷ್ಟ್ಯವನ್ನು ಹೊಂದಿದೆ. ನುಬಿಯಾ ಝಡ್-11 ಪೋನ್‌ಗಳು ಕ್ವಾಡ್ ಕೋರ್ 2.15ಜಿಎಚ್‌ಝಡ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 820 ಪ್ರೊಸೆಸರ್ ಹೊಂದಿದೆ. 
 
ನುಬಿಯಾ ಝಡ್-11 ಪೋನ್‌ಗಳು ಡ್ಯುಯಲ್ ಟೋನ್ ಎಲ್‌ಇಡಿ ಫ್ಲ್ಯಾಶ್ ಜೊತೆಗೆ 16 ಮೆಗಾ ಪಿಕ್ಸೆಲ್ ರಿಯರ್ ಕ್ಯಾಮೆರಾ, ಎಫ್-2 ಅಪರ್ಚರ್ ಹೊಂದಿರುವ 8 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಪೋನ್‌ಗಳು ಫಿಂಗರ್ಪ್ರಿಂಟ್ ಸ್ಕ್ಯಾನರ್ ಹೊಂದಿದ್ದು, ಬ್ಲೂಟೂತ್, ಜಿಪಿಎಸ್ ಗ್ಲೋನಾಸ್, ವೈ-ಫೈ 802.11, ಎ/ಬಿ/ಜಿ/ಎನ್/ಎಸಿ, 4ಜಿ, ಜಿಪಿಎಸ್/ಎ, 3ಜಿ ಮತ್ತು ಯುಎಸ್‌ಬಿ ಕನೆಕ್ಟಿವಿಟಿ ಸೌಲಭ್ಯ ಹೊಂದಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments