Webdunia - Bharat's app for daily news and videos

Install App

ಗಾಂಧಿನಗರದಲ್ಲಿ ಶ್ರಾವಣ ಮಾಸದ ಸಂಭ್ರಮ

Webdunia
ಗಾಂಧಿನಗರದಲ್ಲಿ ಶ್ರಾವಣ ಮಾಸದ ಕಾರ್ಯ ಭರ್ಜರಿಯಾಗಿ ಸಾಗಿದೆ. ಎಲ್ಲೆಡೆ ಹಬ್ಬದ ವಾತಾವರಣ ಗೋಚರಿಸುತ್ತಿದೆ. ಇದೇನು ಆಷಾಡ ಮಾಸ ನಿನ್ನೆ ಮೊನ್ನೆಯಷ್ಟೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಗಾಂಧಿನಗರದವರಿಗೆ ಬುದ್ದಿ ಇಲ್ಲವೇ? ಶ್ರಾವಣ ಆಚರಿಸುತ್ತಿದ್ದಾರೆ ಅಂದುಕೊಳ್ಳಬೇಡಿ. ಇದು ಶ್ರಾವಣ ಚಿತ್ರದ ಕುರಿತ ಸುದ್ದಿ.

ಚಿತ್ರದ ಚಿತ್ರೀಕರಣಕ್ಕೆ ಮಾತ್ರ ಆಷಾಢದ ಛಾಯೆ ಆವರಿಸಿಲ್ಲ. ಅದು ನಿರಂತರವಾಗಿ ಸಾಗಿದೆ. ಚಿತ್ರದ ಧ್ವನಿ ಸುರುಳಿ ಬಿಡುಗಡೆ ಇತ್ತೀಚೆಗೆ ಗಾಂಧಿನಗರದಲ್ಲಿ ನಡೆಯಿತು. ನಟ ಯೋಗೀಶ್ ಅಲಿಯಾಸ್ ಲೂಸ್ ಮಾದ ಇದರಲ್ಲಿ ಪಾಲ್ಗೊಂಡಿದ್ದರು. ಅಕ್ಷಯ್ ಆಡಿಯೋ ಹೊರತಂದಿರುವ ಚಿತ್ರದ ಧ್ವನಿಸುರುಳಿಯನ್ನು ಅವರು ಬಿಡುಗಡೆ ಸಹ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಬಿ.ಎ. ರಾಜಶೇಖರ್ ಇದೊಂದು ಸಂಗೀತಮಯ ಚಿತ್ರ ಆಗುತ್ತೆ ಅನ್ನುವ ಕಲ್ಪನೆ ಇರಲಿಲ್ಲ. ಸಂಗೀತ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳುವ ಗೊಂದಲ ಶೂಟಿಂಗ್ ಆರಂಭವಾಗುವವರೆಗೂ ಇತ್ತು. ಅಂತಿಮವಾಗಿ ಸ್ನೇಹಿತರ ಮೂಲಕ ಪರಿಚಯವಾದ ಕಾರ್ತಿಕ್ ಭೂಪತಿ ಆಯ್ಕೆಯಾದರು. ನಿಜಕ್ಕೂ ಉತ್ತಮ ಸಂಗೀತ ನೀಡಿ, ಚಿತ್ರವನ್ನು ಸಂಗೀತಮಯವಾಗಿಸಿದ್ದಾರೆ ಎಂದರು.

ಹಾಸ್ಯ, ಭಾವುಕತೆ ಹಾಗೂ ಪ್ರೀತಿಗೆ ಹೆಚ್ಚು ಒತ್ತು ನೀಡಲಾಗಿದೆ. ಚಿತ್ರಕಥೆಯಲ್ಲಿ ಹೊಸತನವಿದೆ. ಕಾರ್ತಿಕ್ ಮಲಯಾಳಂನಲ್ಲಿ 100ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಕನ್ನಡದ ಪಾಲಿಗೆ ಇದು ಅವರ ಮೊದಲ ಚಿತ್ರ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments