ಸಿಂಗಪೂರ್ ನಲ್ಲಿ ಇರುವ ಮೌಂಟ್ ಎಲಿಜೆಬತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಡಾ. ಅಂಬರೀಶ್ ಅವರನ್ನು ಕಾಣಲು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹೊರಟರು.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅಂಬಿ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ವಿಕ್ರಮ್ ಆಸ್ಪತ್ರೆಯಿಂದ ಸಿಂಗಪೂರ್ ಗೆ ಕಳುಹಿಸಿ ಕೊಡಲಾಗಿತ್ತು. ಅವರ ಆರೋಗ್ಯದಲ್ಲಿ ಈಗ ಬದಲಾವಣೆ ಕಂಡು ಬಂದಿದ್ದು, ಸಧ್ಯದಲ್ಲೇ ತಮ್ಮ ತಾಯ್ನಾಡಿಗೆ ಹಿಂತಿರುಗುತ್ತಿದ್ದಾರೆ ಅಂಬಿ.