Webdunia - Bharat's app for daily news and videos

Install App

ಕನಸು ಕನಸಾಗೇ ಉಳಿಯಿತು : ಆಶಿಕಾ

Webdunia
ಗುರುವಾರ, 11 ನವೆಂಬರ್ 2021 (14:30 IST)
ನಟ ಪುನೀತ್ ರಾಜ್ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ಆಘಾತವನ್ನು ನೀಡಿದ್ದು, ಅವರೊಡನೆ ತೆರೆ ಹಂಚಿಕೊಳ್ಳುವ, ಕೆಲಸ ಮಾಡುವ ಕನಸನ್ನು ಹೊತ್ತಿದ್ದ ಕಲಾವಿದರ ಕನಸುಗಳು ಹಾಗೇ ಉಳಿದಿವೆ.
ಪ್ರಸ್ತುತ ಸ್ಯಾಂಡಲ್ವುಡ್ನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಆಶಿಕಾ ರಂಗನಾಥ್ ಕೂಡ ಇದಕ್ಕೆ ಹೊರತಾಗಿಲ್ಲ. ಪುನೀತ್ ಅವರೊಂದಿಗೆ ‘ದ್ವಿತ್ವ’ ಚಿತ್ರದಲ್ಲಿ ತೆರೆಹಂಚಿಕೊಳ್ಳುವ ಸಿದ್ಧತೆಯಲ್ಲಿ ಅವರಿದ್ದರು. ಆದರೆ ಅನಿರೀಕ್ಷಿತ ಘಟನೆ ಈ ಎಲ್ಲಾ ನಿರೀಕ್ಷೆಗಳನ್ನೂ ಪುಡಿಪುಡಿ ಮಾಡಿದೆ. ಪುನೀತ್ ಜೊತೆಗಿನ ನೆನಪುಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ. ‘‘ಪುನೀತ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ಕಿತ್ತು. ದ್ವಿತ್ವ ಸಿನಿಮಾದಲ್ಲಿ ನಟಿಸೋಕೆ ಎಲ್ಲಾ ಸಿದ್ದತೆ ನಡೀತಿತ್ತು. ಆದರೆ ಪುನೀತ್ ಸರ್ ಜೊತ ನಟಿಸೊ ಆಸೆ ಕನಸು ಕನಸಾಗೇ ಉಳಿಯಿತು’’ ಎಂದು ಅವರು ಹೇಳಿದ್ದಾರೆ.
ಪುನೀತ್ ರಾಜಕುಮಾರ್ ಅವರೊಂದಿಗಿನ ಇತರ ಸುಂದರ ಕ್ಷಣಗಳನ್ನೂ ಅವರು ಮೆಲುಕು ಹಾಕಿದ್ದಾರೆ. ‘‘ಪುನೀತ್ ಅವರ ನೃತ್ಯ ಬಹಳ ಇಷ್ಟ. ಅವರೂ ನನ್ನ ನೃತ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು’’ ಎಂದು ಆಶಿಕಾ ನುಡಿದಿದ್ದಾರೆ. ‘ಮದಗಜ’ ಚಿತ್ರದ ಸುದ್ದಿಗೋಷ್ಠಿಯ ನಂತರ ಆಶಿಕಾ ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments