Webdunia - Bharat's app for daily news and videos

Install App

ಬೃಂದಾವನ: ದರ್ಶನ್‌‌ ಮೂರು ಹಾಡಿನ ಚಿತ್ರೀಕರಣ ಬಾಕಿ

Webdunia
ಶನಿವಾರ, 10 ಆಗಸ್ಟ್ 2013 (11:26 IST)
PR
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬೃಂದಾವನ ಚಿತ್ರದ ಮೂರು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆಯಂತೆ. ಬೃಂದಾವನ ಚಿತ್ರ ಆರಂಭದಿಂದಲೇ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಐಸ್ಲ್ಯಾಂಡ್ನಲ್ಲಿ ಚಿತ್ರೀಕರಣ ಮುಗಿಸಿ ಬರುತ್ತಲೇ ಕಾಲು ನೋವು ಮಾಡಿಕೊಂಡ ದರ್ಶನ್ ಮೈಸೂರಿನಲ್ಲಿ ಶೂಟಿಂಗ್ ವೇಳೆ ಕುದುರೆ ಮೇಲಿಂದ ಬಿದ್ದು ಕುತ್ತಿಗೆ ಉಳುಕಿಸಿಕೊಂಡರು. ವೈದ್ಯರು ಒಂದು ವಾರದ ವಿಶ್ರಾಂತಿಗೆ ಸಲಹೆ ನೀಡುವ ಮೂಲಕ ಈ ಸಮಸ್ಯೆ ಬಗೆಹರಿಯಿತು. ಬೃಂದಾವನ ಚಿತ್ರೀಕರಣದ ವೇಳೆಗೆ ದರ್ಶನ್ಗೆ ಫಿಲಂಫೇರ್ ಅವಾರ್ಡ್ ಬಂದಿದ್ದು ಸುದ್ದಿಯಾಯಿತು. ಚಿತ್ರೀಕರಣ ಭರದಿಂದ ನಡೆಯುತ್ತಿದ್ದ ಕಾರಣ ಅವರಿಗೆ ಪ್ರಶಸ್ತಿ ತೆಗೆದುಕೊಳ್ಳಲೂ ಹೋಗಲಾಗಲಿಲ್ಲ. ಈ ಬಗ್ಗೆ ದರ್ಶನ್ ಅವರೇ ಬೇಸರಿಸಿಕೊಂಡಿದ್ದು ಮತ್ತೊಂದು ಬಾರಿ ಸುದ್ದಿಯಾಯಿತು.

ಕೊನೆಗೂ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ಹದಿನೈದು ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ದರ್ಶನ್ ಜೊತೆ ಕಾರ್ತೆಕಾ ನಾಯರ್, ಅಜಯ್, ಗೀತಾ, ಶರತ್ ಬಾಬು ಮೊದಲಾದವರು ಪಾಲ್ಗೊಂಡಿದ್ದು ಬೆಂಗಳೂರು ಹಾಗೂ ಮೈಸೂರಿನ ಸುತ್ತಮುತ್ತ ಶೂಟಿಂಗ್ ನಡೆಯಿತು. ಈಗ ಗುಣಮುಖರಾಗಿರುವ ದರ್ಶನ್ ಮತ್ತೆ ಉಳಿದ ಹಾಡಿನ ಭಾಗಕ್ಕೆ ತಯಾರು ನಡೆಸುತ್ತಿದ್ದಾರೆ. ಉಳಿದಿರುವ ಹಾಡಿನಲ್ಲಿ ಒಂದು ಸಕಲೇಶಪುರ ಸಮೀಪ ಚಿತ್ರೀಕರಣಗೊಂಡರೆ ಮತ್ತೆರಡು ಹಾಡಿಗೆ ವಿದೇಶಕ್ಕೆ ಹೋಗಲು ರೆಡಿಯಾಗುತ್ತಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಅವರ ಸಂಗೀತವಿದ್ದು ಕವಿರಾಜ್ ಮತ್ತು ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ತಾರಾಗಣದಲ್ಲಿ ಗೀತಾ, ಮಿಲನ, ಶರತ್ಬಾಬು, ಸಾಯಿಕುಮಾರ್, ಸಾಧುಕೋಕಿಲ ದೊಡ್ಡಣ್ಣ, ಕಿಲ್ಲರ್ ವೆಂಕಟೇಶ್ ಮೊದಲಾದವರಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments