Webdunia - Bharat's app for daily news and videos

Install App

'ಭಾಗ್ಯದ ಬಳೆಗಾರ'ದಲ್ಲಿ ಹೆಜ್ಜೆ ಹಾಕಿದ ಸುಧಾ- ಅನು

Webdunia
MOKSHENDRA
' ಭಾಗ್ಯದ ಬಳೆಗಾರ' ಚಿತ್ರಕ್ಕೆ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಚಿತ್ರದ ಜನಪ್ರಿಯ ಗೀತೆಗೆ ಸುಧಾರಾಣಿ ಹಾಗೂ ಅನು ಪ್ರಭಾಕರ್ ಹೆಜ್ಜೆ ಹಾಕಿದ್ದಾರೆ. ಚಿತ್ರದ ಶೀರ್ಷಿಕೆ ಗೀತೆ 'ಭಾಗ್ಯದ ಬಳೆಗಾರ ಬಾಗಿಲಿಗೆ ಬಂದ..' ಹಾಡಿಗೆ ಸುಧಾರಾಣಿ ಜಾನಪದ ದಿರಿಸಿನಲ್ಲಿ ಹೆಜ್ಜೆ ಹಾಕಿದರು.
MOKSHENDRA

ಸುಧಾರಾಣಿ ತಮ್ಮ ವೃತ್ತಿ ಜೀವನವನ್ನು ಶಿವರಾಜ್‌ಕುಮಾರ್ ನಾಯಕತ್ವದ 'ಆನಂದ್' ಚಿತ್ರದ ಮೂಲಕ ಆರಂಭಿಸಿದ್ದರು. ಈಗ ಅದೇ ನಾಯಕನಿರುವ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕುವುದು ತುಂಬಾ ಖುಷಿಯಾಗುತ್ತಿದೆ ಎಂದರು.

ನಟಿ ಅನುಪ್ರಭಾಕರ್ ಮತ್ತೊಂದು ಜಾನಪದ ಗೀತೆಯಾದ 'ಗಲ್ಲು ಗಲ್ಲೆನುತಾ ಗೆಜ್ಜೆ ಗಲ್ಲು..' ಹಾಡಿಗೆ ಗೆಜ್ಜೆ ಕುಣಿಸಿದರು. ಈ ಎರಡು ಹಾಡುಗಳು ಚಿತ್ರ ಎರಡು ಬೇರೆ ಬೇರೆ ಸನ್ನಿವೇಶಗಳಲ್ಲಿ ಬರುತ್ತದೆಂದು ನಿರ್ಮಾಪಕರು ತಿಳಿಸಿದರು. ಚಿತ್ರದಲ್ಲಿ ಶಿವರಾಜ್ ಕುಮಾರ್ ತೀರಾ ಹಳ್ಳಿ ಭಾಷೆಯಲ್ಲಿ ಮಾತನಾಡಿದ್ದರಂತೆ. ಕಳೆದ ವರ್ಷ 'ನಂದ ಲವ್ಸ್ ನಂದಿತಾ' ಚಿತ್ರ ನಿರ್ಮಿಸಿದ್ದ ರಮೇಶ್ ಕಶ್ಯಪ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
MOKSHENDRA

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments