Webdunia - Bharat's app for daily news and videos

Install App

ಮಗನಿಗಾಗಿ ಅಪ್ಪನ 'ಪ್ರೀತಿಯ ತೇರು'

Webdunia
ಮಗನನ್ನು ನಾಯಕನನ್ನಾಗಿಸಲು ಚಿತ್ರ ಮಾಡುವ ಅಪ್ಪಂದಿರ ಸಂಖ್ಯೆ ಗಾಂಧಿನಗರದಲ್ಲಿ ಹೆಚ್ಚುತ್ತಿದೆ. 'ಪ್ರೀತಿಯ ತೇರು' ಚಿತ್ರದ ನಿರ್ಮಾಪಕ ಲೋಕೇಶ್ ರೆಡ್ಡಿ ಕೂಡಾ ತಮ್ಮ ಮಗನನ್ನು ನಾಯಕನನ್ನಾಗಿ ಮಾಡಲು 'ಪ್ರೀತಿಯ ತೇರು' ಎಂಬ ಚಿತ್ರ ಮಾಡಿದ್ದಾರೆ. ಚಿತ್ರ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದೆ.

ಪ್ರೀತಿಯ ತೇರನ್ನು ಪ್ರಸಾದ್ ಅವರ ನಿರ್ದೇಶನದಲ್ಲಿ ನಿರ್ಮಾಪಕರ ಮಗ ತನಿ ಎಳೆಯುತ್ತಿದ್ದಾರೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿವೆ. ಎಲ್ಲಾ ಹಾಡುಗಳು ಚೆನ್ನಾಗಿ ಬಂದಿವೆ. ಚಿತ್ರದ ಒಂದೊಂದು ಹಾಡು ಚಿತ್ರದ ಕಥೆ ಹೇಳಲಿದೆ ಎಂದರು ಸಂಗೀತ ನಿರ್ದೇಶಕ ಹಾಗೂ ನಿರ್ದೇಶಕ ಪ್ರಸಾದ್.

ಇತ್ತೀಚೆಗೆ ಚಿತ್ರದ ಧ್ವನಿ ಸುರುಳಿಯನ್ನು ಬಿಡುಗಡೆಗೊಳಿಸಲಾಯಿತು. ಗಾಂಧಿನಗರದ ಗ್ರೀನ್‌ಹೌಸ್‌ನಲ್ಲಿ ಇಡೀ ಚಿತ್ರ ತಂಡವೇ ನೆರೆದಿತ್ತು. ''ಕನ್ನಡ ಪ್ರೇಕ್ಷಕರು ಪ್ರೋತ್ಸಾಹಿಸಿದರೆ ಮತ್ತಷ್ಟು ಉತ್ತಮ ಚಿತ್ರ ನೀಡಲಾಗುವುದು'' ಎಂದರು ನಿರ್ಮಾಪಕ ಲೋಕೇಶ್ ರೆಡ್ಡಿ. ಧ್ವನಿ ಸುರುಳಿ ಬಿಡುಗಡೆ ಮಾಡಿದ ನಿರ್ಮಾಪಕ ಕೆ.ಮಂಜು, ''ಗಾಂಧಿನಗರಕ್ಕೆ ಹಣ ಮಾಡುತ್ತೇವೆಂದು ಬರಬೇಡಿ. ಹಣ ಕಳೆದುಕೊಳ್ಳುವ ಮನಸ್ಸು ಇರಬೇಕು'' ಎಂದರು. ಪ್ರೀತಿಯ ತೇರನ್ನು ಪ್ರೇಕ್ಷಕ ಎಳೆಯುತ್ತಾನೋ ಕಾದು ನೋಡಬೇಕು.
MOKSHENDRA

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments