Webdunia - Bharat's app for daily news and videos

Install App

'ಮೇಸ್ತ್ರಿ' ಚಿತ್ರದ ಅತಿಥಿ ಪಾತ್ರದಲ್ಲಿ ದರ್ಶನ್

Webdunia
PR


ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಮೇಸ್ತ್ರಿ' ಚಿತ್ರದಲ್ಲಿ ಸ್ನೇಹಪೂರ್ವಕವಾಗಿ ಒಂದು ಸಾಹಸ ಸನ್ನಿವೇಶದಲ್ಲಿ ಭಾಗವಹಿಸುವರು ಎಂದು ಹೇಳಲಾಗಿತ್ತು. ಅದರಂತೆ ಈಗಾಗಲೇ ಮೂರು ದಿನಗಳ ಚಿತ್ರೀಕರಣದಲ್ಲಿ ನಟ ದರ್ಶನ್ ಅಭಿನಯಿಸಿದ್ದು ಸಾಹಸ ಸನ್ನಿವೇಶಗಳು ಕ್ಯಾಮರಾ ತುಂಬಿಕೊಂಡಿವೆ. ದರ್ಶನ್ ಈ ಹಿಂದೆ ಕೆಲವು ಚಿತ್ರಗಳಲ್ಲಿ ಅತಿಥಿ ನಟರಾಗಿ ಹಾಗೂ ಅವರದೇ ನಿರ್ಮಾಣದ 'ಜೊತೆ ಜೊತೆಯಲಿ' ಮತ್ತು 'ಅರಸು' ಚಿತ್ರಗಳಲ್ಲಿ ಅಭಿನಯಿಸಿದ್ದರು.

' ಮೇಸ್ತ್ರಿ' ಚಿತ್ರಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರ, ಬಂಗಾರಪ್ಪ ಸ್ಲಮ್, ವಿಶ್ವವಿದ್ಯಾಲಯ, ನಂಜನಗೂಡು, ವೇಣುಗೋಪಾಲಸ್ವಾಮಿ ಬೆಟ್ಟ, ಸಕಲೇಶಪುರ, ಮಂಗಳೂರು ಮತ್ತಿತರ ಕಡೆಗಳಲ್ಲಿ ಶೂಟಿಂಗ್ ನಡೆಸಲಾಗಿದೆ ಎಂದು ಚಿತ್ರದ ನಟ ಹಾಗೂ ನಿರ್ಮಾಪಕ ಬಾಲು ತಿಳಿಸಿದ್ದಾರೆ.

' ನಂದಾ ಲವ್ಸ್ ನಂದಿತಾ' ಚಿತ್ರಕ್ಕೆ ಜಿಂಕೆ ಮರಿ ಹಾಡನ್ನು ಬರೆದ ರಾಜಕಿರಣ್ 'ಮೇಸ್ತ್ರಿ' ಚಿತ್ರಕ್ಕೆ ನಿರ್ದೇಶಕರು. ಇಂದಿನ ಸಮಾಜದಲ್ಲಿ ಮಾನವೀಯತೆ ಮರೆಯಾಗುತ್ತಿರುವುದನ್ನು ಚಿತ್ರದಲ್ಲಿ ಒತ್ತಿ ಹೇಳಲಾಗಿದೆಯಂತೆ. ಹರೀಶ್ ಶೃಂಗ ಈ ಚಿತ್ರಕ್ಕೆ ಸಂಭಾಷಣೆ ನೀಡಿದ್ದಾರೆ. ನಿರಂಜನ ಬಾಬು ಚಿತ್ರದ ಛಾಯಾಗ್ರಾಹಕರು.

' ಮೇಸ್ತ್ರಿ' ಚಿತ್ರದ ತಾರಾಗಣದಲ್ಲಿ ಬಾಲು ಮತ್ತು ರಾಣಿ ಮುಖ್ಯ ಪಾತ್ರದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಮಲಯಾಳಂ ಚಿತ್ರರಂಗದ ಖಳ ನಟ ಚಂಬನ್ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments