Webdunia - Bharat's app for daily news and videos

Install App

'ಸಾರಥಿ'ಯ ಬೃಂದಾವನ ಸೆಟ್‌ಗೆ 30 ಲಕ್ಷ!

Webdunia
PR
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಸಾರಥಿ' ಚಿತ್ರದ ಗೀತೆಯೊಂದಕ್ಕೆ 30 ಲಕ್ಷ ಮೌಲ್ಯದ ಅದ್ಧೂರಿ ಸೆಟ್ ನಿರ್ಮಿಸಲಾಗಿದೆ. ರಾಕ್‌ಲೈನ್ ಸ್ಟುಡಿಯೋದಲ್ಲಿರುವ ನಿರ್ಮಿಸಲಾಗಿರುವ ಈ ಬೃಂದಾವನದ ಸೃಷ್ಠಿಕರ್ತ ಕಲಾ ನಿರ್ದೇಶಕ ಈಶ್ವರಿ ಕುಮಾರ್.

ಇಂತಹ ಅದ್ದೂರಿ ಬೃಂದಾವನ ಸೆಟ್‌ನಲ್ಲೇ ನಾಯಕ ಮತ್ತು ನಾಯಕಿ ನರ್ತಿಸುವಂತೆ 'ಸಾರಥಿ'ಗೆ ಗೀತೆ ಬರೆದಿದ್ದಾರೆ ವಿ.ನಾಗೇಂದ್ರ ಪ್ರಸಾದ್.

ಹರ್ಷ ಅವರು ನೃತ್ಯ ಸಂಯೋಜಿಸಿದ ಈ ಗೀತೆಗೆ ನಾಯಕ ದರ್ಶನ್ ಹಾಗೂ ನಾಯಕಿ ದೀಪಾ ಸನ್ನಿಧಿ ಹೆಜ್ಜೆ ಹಾಕಿದ್ದಾರೆ. ಕೃಷ್ಣನ ಬೃಂದಾವನವನ್ನು ಹೋಲುವ ಸೆಟ್‌ನ ನಿರ್ಮಾಣಕ್ಕಾಗಿ ಸುಮಾರು 30 ಲಕ್ಷ ರೂಪಾಯಿ ಖರ್ಚಾಗಿದೆ ಎಂದಿದ್ದಾರೆ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್.

ರಾಜ್‌ ಕಮಲ್ ಆರ್ಟ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಸಾರಥಿ' ಚಿತ್ರಕ್ಕೆ ಈ ವರೆಗೂ 95 ದಿನಗಳ ಚಿತ್ರೀಕರಣ ನಡೆದಿದೆ.

ದಿನಕರ ತೂಗುದೀಪ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಚಿಂತನ್ ಸಂಭಾಷಣೆ, ವಿ.ಹರಿಕೃಷ್ಣರ ಸಂಗೀತವಿದೆ.

ಕೆ.ಕೃಷ್ಣಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ-ಪಳನಿರಾಜ್ ಸಾಹಸ ಹಾಗೂ ಮದನ್ ಹರಿಣಿ-ಹರ್ಷ ಅವರ ನೃತ್ಯ ನಿರ್ದೇಶನವಿದೆ.

ಚಿತ್ರದ ತಾರಾ ಬಳಗದಲ್ಲಿ ರಂಗಾಯಣ ರಘು, ಲೋಹಿತಾಶ್ವ, ಅಜಯ್, ಬುಲೆಟ್ ಪ್ರಕಾಶ್, ಸೀತಾ, ಶರತ್‌ ಕುಮಾರ್, ವಿಶ್ವ, ಮುನಿ, ಕೋಟೆ ಪ್ರಭಾಕರ್ ಮುಂತಾದವರಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments