Webdunia - Bharat's app for daily news and videos

Install App

ಸೋಡಿಂಯಂ ಬ್ಲಾಸ್ಟ್ ಪ್ರಕರಣ: ಮಧುಗಿರಿ ಉಪ ಕಾರಾಗ್ರಹಕ್ಕೆ ಡ್ರೋಣ್ ಪ್ರತಾಪ್ ಶಿಫ್ಟ್‌

Sampriya
ಸೋಮವಾರ, 16 ಡಿಸೆಂಬರ್ 2024 (14:42 IST)
Photo Courtesy X
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋಣ್ ಪ್ರತಾಪ್‌ಗೆ ಡಿ.26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಇದೀಗ ಅವರನ್ನು ಮಧುಗಿರಿ ಉಪ ಕಾರಾಗ್ರಹಕ್ಕೆ ಕಳುಹಿಸಲಾಗಿದೆ.

ಡಿ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಮೂರು ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕಳೆದ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ನ್ಯಾಯಾಲಯ 3 ದಿನ ಕಸ್ಟಡಿಗೆ ಕೊಟ್ಟಿತ್ತು. ಹೀಗಾಗಿ ಇಂದು ಕಸ್ಟಡಿ ಮುಗಿದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉಳಿದಂತೆ ಡ್ರೋನ್ ಪ್ರತಾಪ್‌ಗೆ ಸಹಕರಿಸಿದ ಇನ್ನೂ ಮೂವರ ಮೇಲೂ ಎಫ್ಐಆರ್ ದಾಖಲಾಗಿತ್ತು. ಕ್ಯಾಮೆರಾ ಮ್ಯಾನ್ ವಿನಯ್, ಸೋಡಿಯಂ ಕೊಡಿಸಿದ ಪ್ರಜ್ವಲ್ ಹಾಗೂ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಮೇಲೂ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments