Webdunia - Bharat's app for daily news and videos

Install App

ನಿಮ್ಮ ಜತೆ ಈಗಿರುವುದು ನನ್ನ ಅದೃಷ್ಟವೆಂದು ಭಾವಿಸಿದ್ದೇನೆ: ಅಂಬರೀಷ್ ಸುದ್ದಿಗೋಷ್ಠಿ

Webdunia
ಶುಕ್ರವಾರ, 11 ಏಪ್ರಿಲ್ 2014 (17:02 IST)
PR
PR
ಬೆಂಗಳೂರು, ಏ.11: ವಸತಿ ಸಚಿವ ಅಂಬರೀಷ್ ಅವರು ಮಲ್ಯೇಷ್ಯಾದಿಂದ ಹಿಂತಿರುಗಿದ ಬಳಿಕ ನಗರದ ಅಶೋಕ ಹೊಟೆಲ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಕೆ.ಜೆ ಜಾರ್ಜ್, ಪುತ್ರ ಅಭಿಷೇಕ್ ಗೌಡ ಮುಂತಾದವರು ಹಾಜರಿದ್ದರು. ನಿಮ್ಮ ಜತೆ ನಾನು ಈಗಿರುವುದು ನನ್ನ ಅದೃಷ್ಟವೆಂದು ಭಾವಿಸಿದ್ದೇನೆ. ನನ್ನ ನಿರ್ಲಕ್ಷ್ಯದಿಂದ ಆರೋಗ್ಯ ಹದೆಗೆಡಲು ಕಾರಣವಾಯಿತು. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಹಾರೈಕೆ ಇದರಿಂದ ಸಿಕ್ಕಿದೆ. ಯಾವುದೇ ಜಾತಿ, ಧರ್ಮವೆನ್ನದೇ ನನಗೆ ಶುಭ ಹಾರೈಸಿದ್ದಾರೆ ಎಂದು ಅಂಬರೀಷ್ ಹೇಳಿದರು.

ಸಿಂಗಪುರದಲ್ಲಿ ನನ್ನನ್ನು ನೋಡಲು ಬಡವರು ಕೂಡ ದುಡ್ಡು ಹಾಕಿಕೊಂಡು ಅಷ್ಟು ದೂರ ಬಂದಿದ್ದಕ್ಕೆ ಕೃತಜ್ಞನಾಗಿದ್ದೇನೆ. ಜನಗಳು ತಮ್ಮ ಮೇಲೆ ಇರಿಸಿದ ವಿಶ್ವಾಸ, ನಂಬಿಕೆಯಿಂದ ತಾವು ಖಳನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ನಿಮ್ಮೆಲ್ಲರ ಅಭಿಮಾನದಿಂದ ನಾಯಕನಟನಾಗಿ ಬೆಳೆದೆ. ನಂತರ ಸಂಸತ್ ಸದಸ್ಯನಾಗಿ, ಕೇಂದ್ರ ಸಚಿವನಾಗಿ, ರಾಜ್ಯ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ವಸತಿ ಸಚಿವನಾಗಿ ನಾನಾ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಯೋಜಿಸಿದ್ದೇನೆ ಎಂದು ಅಂಬರೀಷ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments