ದೀಪಿಕಾ ಪಡುಕೋಣೆ ತಲೆಗೆ ಐದು ಕೋಟಿ ಘೋಷಣೆ: ಪದ್ಮಾವತಿ ನಟಿಗೆ ಈಗ ಏಳು ಸುತ್ತಿನ ಕೋಟೆ

Webdunia
ಶುಕ್ರವಾರ, 17 ನವೆಂಬರ್ 2017 (08:39 IST)
ಮುಂಬೈ: ಪದ್ಮಾವತಿ ಸಿನಿಮಾ ಬಿಡುಗಡೆ ವಿವಾದದ ಬಿಸಿ ಇದೀಗ ನಟಿ ದೀಪಿಕಾ ಪಡುಕೋಣೆಗೆ ತಾಕಿದೆ. ಭಾರತೀಯ ಮಹಿಳೆಯರು ಹಿಂಜರಿಕೆಯಲ್ಲಿದ್ದಾರೆ ಎಂದು ನಟಿ ವಿವಾದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ಸಂಘಟನೆಯೊಂದು ಜೀವ ಬೆದರಿಕೆ ಒಡ್ಡಿದೆ.
 

ಉತ್ತರ ಪ್ರದೇಶದ ಛತ್ರಿಯ ಸಮಾಜ ಪದ್ಮಾವತಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆಯ ತಲೆ ಕತ್ತರಿಸಿ ತಂದವರಿಗೆ 5 ಕೋಟಿ ರೂ. ಬಹುಮಾನ ನೀಡುವುದಾಗಿ ಬೆದರಿಕೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ನಟಿಯ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ಛತ್ರಿಯ ಸಮಾಜದ ಕಾರ್ಯಕರ್ತ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಠಾಕೂರ್ ಅಭಿಷೇಕ್ ಸೋಮ್ ರುಂಡ ಕತ್ತರಿಸುವವರಿಗೆ 5 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದು, ಅನಾಹುತವಾಗುವ ಮೊದಲು ದೇಶ ಬಿಟ್ಟು ತೆರಳುವಂತೆ ದೀಪಿಕಾಗೆ ಬೆದರಿಕೆ ಹಾಕಿದ್ದಾರೆ.

ಡಿಸೆಂಬರ್ 1 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿದ್ದು, ಈಗಾಗಲೇ ರಜಪೂತ್ ಕರ್ಣಿ ಸೇನೆ  ಆ ದಿನ ಭಾರತ ಬಂದ್ ಗೆ ಕರೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments