ರಚಿತಾ ರಾಂ ಹಾದಿಯಲ್ಲಿ ಅಭಿಷೇಕ್ ಅಂಬರೀಶ್

Webdunia
ಸೋಮವಾರ, 2 ಅಕ್ಟೋಬರ್ 2023 (08:50 IST)
Photo Courtesy: Twitter
ಬೆಂಗಳೂರು: ಕಾವೇರಿ ನದಿ ವಿಚಾರವಾಗಿ ಹೋರಾಟಗಳು ನಡೆಯುತ್ತಿದ್ದು ರೈತರು ಸಂಕಷ್ಟದಲ್ಲಿರುವಾಗ ಈ ಬಾರಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲ್ಲ ಎಂದು ನಟಿ ರಚಿತಾ ರಾಂ ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾ ಮೂಲಕ ಹೇಳಿದ್ದರು.

ಈ ಬಾರಿ ಮನೆ ಮುಂದೆ ಬರಬೇಡಿ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕಾರಣಕ್ಕೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಮನಸ್ಸಾಗುತ್ತಿಲ್ಲ ಎಂದಿದ್ದರು.

ಇದೀಗ ಜ್ಯೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಕೂಡಾ ಅದೇ ಹಾದಿಯಲ್ಲಿದ್ದಾರೆ. ನಾಳೆ ಅಭಿಷೇಕ್ ಜನ್ಮದಿನವಿದ್ದು ಈ ಬಾರಿ ರೈತರು ಸಂಕಷ್ಟದಲ್ಲಿರುವಾಗ ಅದ್ಧೂರಿ ಆಚರಣೆ ಮಾಡಲ್ಲ ಎಂದಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು ‘ಈ ವರ್ಷ ನಮ್ಮ ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಹಾಗೂ ನಮ್ಮ ಕಾವೇರಿಗಾಗಿ ಹಲವಾರು ಜನರು ಹೋರಾಟ ಮಾಡುತ್ತಿರುವುದರಿಂದ ಈ ವರ್ಷ ನಾನು ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ಇಚ್ಛಿಸಿದ್ದೇನೆ. ಎಲ್ಲಾ ರೆಬಲ್ ಅಭಿಮಾನಿಗಳು ನೀವು ಇರುವಲ್ಲಿಯೇ ನನಗೆ ಶುಭ ಹಾರೈಸಿ, ಆಶೀರ್ವದಿಸಿ. ಅಭಿಮಾನಿಗಳು ಪ್ರೀತಿಯಿಂದ ಮನೆ ಹತ್ತಿರ ಬಂದರೂ ಬರಬೇಡಿ ಎನ್ನುವುದು ನಮ್ಮ ಸಂಪ್ರದಾಯವಲ್ಲ. ಆದರೆ ಬಂದವರು ಯಾವುದೇ ಹಾರ, ಕೇಕ್, ಪಟಾಕಿಗಳು ಹಾಗೂ ಉಡುಗೊರೆಗಳನ್ನು ತರದೆ ಶುಭ ಹಾರೈಸಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments