Webdunia - Bharat's app for daily news and videos

Install App

ಅಂಬರೀಶ್ ಮಾಡಿದ ಕೆಲಸವನ್ನೇ ಮಾಡಿದ ಪುತ್ರ ಅಭಿಷೇಕ್

Webdunia
ಗುರುವಾರ, 13 ಡಿಸೆಂಬರ್ 2018 (09:45 IST)
ಬೆಂಗಳೂರು: ಅಂಬರೀಶ್ ತೀರಿಕೊಂಡು 15 ದಿನಗಳಾಗಿವೆಯಷ್ಟೇ. ಅಪ್ಪ ತೀರಿಕೊಂಡ ದುಃಖ ಮನಸ್ಸಲ್ಲಿರುವಾಗಲೇ ಪುತ್ರ ಅಭಿಷೇಕ್ ತಮ್ಮ ಕರ್ತವ್ಯ ನಿಭಾಯಿಸಲು ಹಾಜರಾಗಿದ್ದಾರೆ.


ತಮ್ಮ ಚೊಚ್ಚಲ ಅಭಿನಯದ ‘ಅಮರ್’ ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಬಾಕಿಯಿದ್ದು, ಅಂಬರೀಶ್ ತೀರಿಕೊಂಡಿದ್ದರಿಂದ ಕೆಲವು ದಿನ ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ ಚಿತ್ರತಂಡಕ್ಕೆ ತಮ್ಮಿಂದ ತೊಂದರೆಯಾಗುವುದು ಬೇಡವೆಂದು ಅಭಿ ದುಃಖ ಮರೆತು ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ. ಅಪ್ಪನ ಫೋಟೋ ಹಿಡಿದು ಶೂಟಿಂಗ್ ಗೆ ಹೊರಟ ಅಭಿ ಫೈಟಿಂಗ್ ದೃಶ್ಯದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅಭಿ ‘ಮತ್ತೆ ಕೆಲಸಕ್ಕೆ ಮರಳುತ್ತಿದ್ದೇನೆ. ನನ್ನ ತಂದೆ ರೆಬೆಲ್ ನನ್ನನ್ನು ನೋಡುತ್ತಿದ್ದಾರೆ’ ಎಂದು ಅಂಬರೀಶ್ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ನಿಂತಿರುವ ಫೋಟೋ ಪ್ರಕಟಿಸಿದ್ದಾರೆ.

ಅಂಬರೀಶ್ ಕೂಡಾ ತಮ್ಮ ತಂದೆ ಸಾವಿನ ಮರುದಿನವೇ ಚಿತ್ರ ತಂಡಕ್ಕೆ ತೊಂದರೆಯಾಗುವುದು ಬೇಡವೆಂದು ಚಿತ್ರೀಕರಣಕ್ಕೆ ಹಾಜರಾಗಿದ್ದರು. ಇದೀಗ ಅವರ ಪುತ್ರ ಕೂಡಾ ಅವರದ್ದೇ ಹಾದಿಯಲ್ಲಿ ನಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments