Webdunia - Bharat's app for daily news and videos

Install App

ಅಂಬರೀಶ್ ಮಾಡಿದ ಕೆಲಸವನ್ನೇ ಮಾಡಿದ ಪುತ್ರ ಅಭಿಷೇಕ್

Webdunia
ಗುರುವಾರ, 13 ಡಿಸೆಂಬರ್ 2018 (09:45 IST)
ಬೆಂಗಳೂರು: ಅಂಬರೀಶ್ ತೀರಿಕೊಂಡು 15 ದಿನಗಳಾಗಿವೆಯಷ್ಟೇ. ಅಪ್ಪ ತೀರಿಕೊಂಡ ದುಃಖ ಮನಸ್ಸಲ್ಲಿರುವಾಗಲೇ ಪುತ್ರ ಅಭಿಷೇಕ್ ತಮ್ಮ ಕರ್ತವ್ಯ ನಿಭಾಯಿಸಲು ಹಾಜರಾಗಿದ್ದಾರೆ.


ತಮ್ಮ ಚೊಚ್ಚಲ ಅಭಿನಯದ ‘ಅಮರ್’ ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಬಾಕಿಯಿದ್ದು, ಅಂಬರೀಶ್ ತೀರಿಕೊಂಡಿದ್ದರಿಂದ ಕೆಲವು ದಿನ ಚಿತ್ರೀಕರಣ ಸ್ಥಗಿತಗೊಂಡಿತ್ತು. ಇದೀಗ ಚಿತ್ರತಂಡಕ್ಕೆ ತಮ್ಮಿಂದ ತೊಂದರೆಯಾಗುವುದು ಬೇಡವೆಂದು ಅಭಿ ದುಃಖ ಮರೆತು ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ. ಅಪ್ಪನ ಫೋಟೋ ಹಿಡಿದು ಶೂಟಿಂಗ್ ಗೆ ಹೊರಟ ಅಭಿ ಫೈಟಿಂಗ್ ದೃಶ್ಯದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅಭಿ ‘ಮತ್ತೆ ಕೆಲಸಕ್ಕೆ ಮರಳುತ್ತಿದ್ದೇನೆ. ನನ್ನ ತಂದೆ ರೆಬೆಲ್ ನನ್ನನ್ನು ನೋಡುತ್ತಿದ್ದಾರೆ’ ಎಂದು ಅಂಬರೀಶ್ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ನಿಂತಿರುವ ಫೋಟೋ ಪ್ರಕಟಿಸಿದ್ದಾರೆ.

ಅಂಬರೀಶ್ ಕೂಡಾ ತಮ್ಮ ತಂದೆ ಸಾವಿನ ಮರುದಿನವೇ ಚಿತ್ರ ತಂಡಕ್ಕೆ ತೊಂದರೆಯಾಗುವುದು ಬೇಡವೆಂದು ಚಿತ್ರೀಕರಣಕ್ಕೆ ಹಾಜರಾಗಿದ್ದರು. ಇದೀಗ ಅವರ ಪುತ್ರ ಕೂಡಾ ಅವರದ್ದೇ ಹಾದಿಯಲ್ಲಿ ನಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments