Webdunia - Bharat's app for daily news and videos

Install App

ಪೊಲೀಸ್ ತನಿಖೆ ವೇಳೆ ಆರೋ‍ಪಿ ಪವಿತ್ರಾ ಗೌಡ ಕಣ್ಣೀರು

Sampriya
ಶುಕ್ರವಾರ, 6 ಸೆಪ್ಟಂಬರ್ 2024 (17:19 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ  ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದ್ದ ಹಾಗೇ ಒಂದೊಂದೆ ವಿಷಯಗಳು ಹೊರಬೀಳುತ್ತಿದೆ. ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದಾಗ ದರ್ಶನ್ ಆಪ್ತೆ ಪವಿತ್ರಾ ಗೌಡ ಕಣ್ಣೀರು ಹಾಕ್ತಿರುವ ಫೋಟೋ ರಿವೀಲ್ ಆಗಿದೆ.

ಪಟ್ಟಣಗೆರೆಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಡಿ ಗ್ಯಾಂಗ್ ನಡೆಸಿದ ಹಲ್ಲೆ ಹಾಗೂ ತನಿಖೆ ಸಂಬಂಧದ ಕೆಲ ಫೋಟೋಗಳು ರಿವೀಲ್ ಆಗಿತ್ತು. ಅದರಲ್ಲಿ ರೇಣುಕಾಸ್ವಾಮಿ ಪ್ರಾಣ ಭಿಕ್ಷೆ ಬೇಡುತ್ತಿರುವುದು ಹಾಗು ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿರುವ ಫೋಟೋ ಹತ್ಯೆಯ ಕರಾಳತೆಯನ್ನು ಬಿಚ್ಚಿಡುತ್ತಿದೆ.  ಸ್ಟೋನಿ ಬ್ರೂಕ್‌ನಲ್ಲಿ ನಟ ದರ್ಶನ್ ಗ್ಯಾಂಗ್ ಮಾಡಿದ ಪಾರ್ಟಿಯನ್ನು ಮರುಸೃಷ್ಟಿ ಮಾಡಿ ಪೊಲೀಸರು ತನಿಖೆ ನಡೆಸಿದ ಫೋಟೋ ಕೂಡಾ ರಿವೀಲ್ ಆಗಿತ್ತು.

ಇದೀಗ ಪವಿತ್ರಾ ಗೌಡ ಪೊಲೀಸ್ ಕಸ್ಟಡಿಯಲ್ಲಿ ತನಿಖೆ ಎದುರಿಸುತ್ತಿರುವ ಫೋಟೋ ರಿವೀಲ್ ಆಗಿದೆ.  ಅದರಲ್ಲಿ ಸಪ್ಪೆ ಮುಖ ಮಾಡಿಕೊಂಡು, ಕಣ್ಣೀರು ಹಾಕುತ್ತಿರುವ ಹಾಗಿದೆ. ಎಪಿನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಎದುರಿಸುತ್ತಿರುವ ಫೋಟೋ ಇದಾಗಿದೆ.

ಇದೀಗ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಆಪ್ತೆ ಪವಿತ್ರಾ ಗೌಡ ಮೊಬೈಲ್ ಸೇರಿದಂತೆ ಹಲವರ ಮೊಬೈಲ್ ಫೋನ್ ರಿಟ್ರೀವ್ ಮಾಡಲಾಗಿದೆ. ಆರೋಪಿಗಳ ಮೊಬೈಲ್‌ನಲ್ಲಿ ರೇಣುಕಾಸ್ವಾಮಿಗೆ ಟಾರ್ಚರ್ ನೀಡಿದ ಫೋಟೋಗಳು ಸಿಕ್ಕಿದೆ ಎನ್ನಲಾಗಿದೆ.

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಫೈನಲ್ ಹಂತಕ್ಕೆ ತಲುಪಿ, ಇದೀಗ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸಿದ್ದಾರೆ. ದರ್ಶನ್ ಅವರು ಪ್ರಕರಣ ಸಂಬಂಧ ಜೈಲು ಸೇರಿ 3 ತಿಂಗಳು ಆಗ್ತಾ ಬಂದಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments