ಬೆಂಗಳೂರು: ಕನ್ನಡದ ಹೆಮ್ಮೆಯ ಹಿರಿಯ ಕಲಾವಿದ ಅನಂತ್ ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಕನ್ನಡಿಗರ ಹೆಮ್ಮೆಯ ಕ್ಷಣವನ್ನು ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ನಟನಿಗೆ ಶುಭಕೋರಿದ್ದಾರೆ.
ಕನ್ನಡ ಸೇರಿದಂತೆ ಹಲವು ಸಿನಿಮಾ ರಂಗದಲ್ಲಿ ಕೆಲಸ ಮಾಡಿರುವ ನಂತ್ನಾಗ್ ಅವರಿಗೆ ಹಲವು ವರ್ಷಗಳಿಂದ ಪ್ರದ್ಮಭೂಷಣ ಪ್ರಶಸ್ತಿ ನೀಡಬೇಕೆಂಬುದು ಕನ್ನಡರಿಗ ಆಶಯವಾಗಿತ್ತು.
ಈಚೆಗೆ ಪದ್ಮಭೂಷಣ ಘೋಷಣೆ ಮಾಡಿದ ಸರ್ಕಾರ ಇಂದು ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್ ನಾಗ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು.
ಅನಂತ್ ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.