Webdunia - Bharat's app for daily news and videos

Install App

ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿರುವ ಅನಿರುದ್ಧ್ ಜತ್ಕಾರ್

Webdunia
ಶುಕ್ರವಾರ, 21 ಜುಲೈ 2023 (16:27 IST)
Photo Courtesy: WD
ಬೆಂಗಳೂರು: ಕೆಲವು ದಿನಗಳ ಬ್ರೇಕ್ ನ ನಂತರ ನಟ ಅನಿರುದ್ಧ್ ಜತ್ಕಾರ್ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಸಿನಿಮಾ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ನಿನ್ನೆ ಮೈಸೂರಿನ ಸಾಹಸಸಿಂಹ ವಿಷ್ಣುವರ್ಧನ್‍ ಸ್ಮಾರಕದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಈ ವೇಳೆ ಭಾರತಿ ವಿಷ್ಣುವರ್ಧನ್ ಕೂಡಾ ಹಾಜರಿದ್ದರು. ಜೊತೆ ಜೊತೆಯಲಿ ಧಾರವಾಹಿ ವಿವಾದದ ಬಳಿಕ ಅನಿರುದ್ಧ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಅವರ ಅಭಿಮಾನಿಗಳು ಕಾಯುತ್ತಿದ್ದರು. ಈ ನಡುವೆ ಸೂರ್ಯವಂಶ ಎಂಬ ಧಾರವಾಹಿ ಸೆಟ್ಟೇರಿದರೂ ಬಳಿಕ ಅರ್ಧಕ್ಕೇ ನಿಂತಿದ್ದು ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಇದೀಗ ಸಿನಿಮಾ ಮೂಲಕ ಭರ್ಜರಿಯಾಗಿ ಅನಿರುದ್ಧ್ ಕಮ್ ಬ್ಯಾಕ್ ಮಾಡುತ್ತಿದ್ದಾರೆ ಎನ್ನಬಹುದು.

ಅಂದ ಹಾಗೆ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ವಿಜಯ್ ರಾಘವೇಂದ್ರ ನಾಯಕರಾಗಿ ರಾಘು ಸಿನಿಮಾ ಮಾಡಿದ್ದ ಆನಂದ್ ರಾಜ್. ಚಿತ್ರದ ಕತೆ ಕೂಡಾ ಆನಂದ್ ಅವರದ್ದೇ. ಈಗ ಅನಿರುದ್ಧ್ ನಾಯಕರಾಗಿ ಹೊಸ ಸಿನಿಮಾಗೆ ಸರ್ವೋತ್ತಮ್ ರಾಜು ಬಂಡವಾಳ ಹೂಡಲಿದ್ದಾರೆ. ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜಿಸಲಿದ್ದಾರೆ. ಚಿತ್ರದಲ್ಲಿ ಅನಿರುದ್ಧ್ ಗೆ ಇಬ್ಬರು ನಾಯಕಿಯರು. ನಿಧಿ ಸುಬ್ಬಯ್ಯ ಮತ್ತು ರಾಚೆಲ್ ಡೇವಿಡ್ ಅಭಿನಯಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments