Webdunia - Bharat's app for daily news and videos

Install App

ಭಾರತಿ ವಿಷ್ಣುವರ್ಧನ್ ‘ಬಾಳೆ ಬಂಗಾರ’ ಸಾಕ್ಷ್ಯ ಚಿತ್ರದಲ್ಲಿ ದಿಗ್ಗಜ ನಟರು

Webdunia
ಸೋಮವಾರ, 16 ಆಗಸ್ಟ್ 2021 (09:46 IST)
ಬೆಂಗಳೂರು: ಹಿರಿಯ ನಟಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯ ಚಿತ್ರ ‘ಬಾಳೆ ಬಂಗಾರ’ ಬಿಡುಗಡೆಗೆ ಸಿದ್ಧವಾಗಿದ್ದು, ಇದೀಗ ಟ್ರೈಲರ್ ಲಾಂಚ್ ಆಗಿದೆ.

 

ಈ ಸಾಕ್ಷ್ಯ ಚಿತ್ರವನ್ನು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಪರಿಕಲ್ಪನೆ, ಸಂಶೋಧನೆ, ನಿರೂಪಣೆ, ನಿರ್ದೇಶನ ಮಾಡಿ, ಕೀರ್ತಿ ಇನ್ನೋವೇಶ್ ಬ್ಯಾನರ್ ನಲ್ಲಿ ನಿರ್ಮಿಸಿದ್ದಾರೆ.

ಈ ಸಾಕ್ಷ್ಯ ಚಿತ್ರದ ಟ್ರೈಲರ್ ನಿನ್ನೆ ಭಾರತಿ ವಿಷ್ಣುವರ್ಧನ್ ಜನ್ಮದಿನ ನಿಮಿತ್ತ ಬಿಡುಗಡೆಯಾಗಿದೆ. ಇದರಲ್ಲಿ ಭಾರತಿ ವಿಷ್ಣುವರ್ಧನ್ ಬಗ್ಗೆ ಹಿರಿಯ ನಟ ಶಿವರಾಂ, ನಿರ್ದೇಶಕ ಭಗವಾನ್, ಶಿವರಾಜ್ ಕುಮಾರ್, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಸೇರಿದಂತೆ ಭಾರತಿ ವಿಷ್ಣುವರ್ಧನ್ ಜೊತೆ ನಟಿಸಿದ ಅನೇಕ ದಿಗ್ಗಜ ಕಲಾವಿದರು, ತಂತ್ರಜ್ಞರು ಅವರ ಕುರಿತಾದ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆದರೆ ಅವರ ಯಶಸ್ಸಿನ ಹಿಂದಿರುವ ಶಕ್ತಿ ಭಾರತಿ ವಿಷ್ಣುವರ್ಧನ್ ಎಂದರೂ ತಪ್ಪಾಗಲಾರದು. ಅವರ ಬದುಕಿನ ಕತೆ ತಿಳಿಯಬೇಕಾದರೆ ಈ ಸಾಕ್ಷ್ಯ ಚಿತ್ರ ನೋಡಲೇಬೇಕು.

ಈ ಸಾಕ್ಷ್ಯ ಚಿತ್ರದಲ್ಲಿ ಭಾರತಿ ವಿಷ್ಣುವರ್ಧನ್ ಜೀವನ ಕತೆ, ಅವರು ಅನುಭವಿಸಿದ ಕಷ್ಟಗಳು, ಯಶಸ್ಸು, ಸಾಹಸಸಿಂಹ ವಿಷ್ಣುವರ್ಧನ್ ಪತ್ನಿಯಾಗಿ ಅವರ ಜೀವನದ ಕತೆಯನ್ನು ಹೇಳಲಾಗಿದೆ. ಇದಕ್ಕೆ ಸಂಗೀತ ಸಂಯೋಜಿಸಿರುವುದು ಗುರುಕಿರಣ್. ಇದೇ ತಿಂಗಳು ಇದನ್ನು ಬಿಡುಗಡೆ ಮಾಡಲು ಅನಿರುದ್ಧ್ ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments