Webdunia - Bharat's app for daily news and videos

Install App

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

Sampriya
ಶುಕ್ರವಾರ, 20 ಜೂನ್ 2025 (18:59 IST)
Photo Credit X
ಬೆಂಗಳೂರು: ಜೊತೆ ಜೊತೆಯಲಿ ಸೀರಿಯಲ್ ನಟ ಅನಿರುದ್ಧ್ಜಜತ್ಕರ್‌  ಅವರು  ಬೆಂಗಳೂರಿನ ನಗರದಾದ್ಯಂತ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು. 

ಡಿಕೆ ಶಿವಕುಮಾರ್‌ ಅವರನ್ನು ಖುದ್ದು ಭೇಟಿಯಾಗಿ ನಟ ಅನಿರುದ್ಧ್ ಅವರು ಈ ಸಂಬಂಧ ಮನವಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಮೂರು ಅಂಶಗಳನ್ನು ಉಲ್ಲೇಖಿಸಿದ್ದಾರೆ. 

1.    ಬೆಂಗಳೂರಿನ ನಗರದಾದ್ಯಂತ ಮೂಲಭೂತ ಸೌಕರ‍್ಯಗಳ ಕೊರತೆ ಎದ್ದು ಕಾಣುತ್ತಿದ್ದು ದಯಮಾಡಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿ ವಿನಂತಿ – ಬಹುತೇಕ ರಸ್ತೆಗಳ ಡಾಂಬರೀಕರಣ ಆಗಬೇಕು, ಬೀದಿ ದೀಪಗಳ ಸಮಸ್ಯೆ, ರಸ್ತೆಗಳ ತುಂಬಾ ಕಸದ ಸಮಸ್ಯೆ, ಫುಟ್‌ಪಾತ್‌ ಗಳ ಸಮಸ್ಯೆಗಳನ್ನು ಬಗೆಹರಿಸಬೇಕು.

2.    ದುಸ್ಥಿತಿಯಲ್ಲಿರುವ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರ ಕೆರೆಯನ್ನು ಶುದ್ಧೀಕರಿಸುವ ಮೂಲಕ 
ಜೀರ್ಣೋದ್ಧಾರ ಮಾಡಿ, ಕೆರೆಯನ್ನು ಪುನಶ್ಚೇತನಗೊಳಿಸಬೇಕಾಗಿ ವಿನಂತಿ.

3.    ದುಸ್ಥಿತಿಯಲ್ಲಿರುವ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರ ಸಮೀಪದ ತರಳು ಗ್ರಾಮದ ಬಳಿಯಿರುವ ಗುಳಕಮಲೆ ಕೆರೆಯನ್ನು ಜರ‍್ಣೋದ್ಧಾರ ಮಾಡಬೇಕಾಗಿ ವಿನಂತಿ.

ಈ ಹಿಂದೆ ಕೂಡಾ ನಟ ಅನಿರುದ್ಧ ಸಾಮಾಜಿಕ ಕಳಕಳಿಯ ವಿಡಿಯೋವನ್ನು ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಅಧಿಕಾರಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿ, ಆ ಕುರಿತಾದ ವಿಡಿಯೊವನ್ನು ಅವರು ಹಂಚಿಕೊಂಡಿದ್ದರು. ಇದೀಗ ಬೆಂಗಳೂರಿನ ಪ್ರಮುಖ ಸಮಸ್ಯೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಅನಿರುದ್ಧ್‌ ಭೇಟಿಯಾಗಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮುಂದಿನ ಸುದ್ದಿ
Show comments