Webdunia - Bharat's app for daily news and videos

Install App

ನಟ ದರ್ಶನ್ ಸೇರಿ 6 ಮಂದಿ ವಿರುದ್ಧ ಇಂದು ಮಹತ್ವದ ತೀರ್ಪು ನೀಡಲಿರುವ ಕೋರ್ಟ್

Krishnaveni K
ಸೋಮವಾರ, 14 ಅಕ್ಟೋಬರ್ 2024 (09:06 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಂಧಿತರಾಗಿ ಬರೋಬ್ಬರಿ ಮೂರು ತಿಂಗಳ ಬಳಿಕ ನಟ ದರ್ಶನ್ ಸೇರಿ 6 ಮಂದಿಯ ಜಾಮೀನು ಭವಿಷ್ಯ ಇಂದು ಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.

ದರ್ಶನ್ ಸೇರಿ 6 ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹೀಗಾಗಿ ಕೋರ್ಟ್ ತೀರ್ಪಿನತ್ತ ಇಂದು ಎಲ್ಲರ ಚಿತ್ತವಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಮತ್ತು ಪೊಲೀಸ್ ಪರ ವಕೀಲ ಪ್ರಸನ್ನಕುಮಾರ್ ತಮ್ಮ ವಾದ ಮಂಡಿಸಿದ್ದಾರೆ.

ದರ್ಶನ್, ಪವಿತ್ರಾ ಗೌಡ, ಪವನ್ ಸೇರಿದಂತೆ 6 ಮಂದಿ ಪ್ರಮುಖ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟವಾಗಲಿದೆ. ಒಂದು ವೇಳೆ ಜಾಮೀನು ಸಿಗದೇ ಹೋದರೆ ನಟ ದರ್ಶನ್ ಮತ್ತೆ ವೈದ್ಯಕೀಯ ಕಾರಣ ನೀಡಿ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಬಹುದು.

ಈಗಾಗಲೇ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನಲ್ಲಿಯೇ ಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹಠಕ್ಕೆ ಬಿದ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ನ್ಯಾಯಾಲಯಕ್ಕೆ ವೈದ್ಯಕೀಯ ವರದಿ ಸಲ್ಲಿಸಲಿದ್ದಾರೆ. ಇದನ್ನು ಪರಿಗಣಿಸಿ ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಇಂದು ಎಲ್ಲರಲ್ಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments