Webdunia - Bharat's app for daily news and videos

Install App

ಪಬ್ ನಲ್ಲಿ ಪಾರ್ಟಿ ಕೇಸ್: ದರ್ಶನ್ ಸೇರಿ ಎಲ್ಲಾ ನಟರು ಇಂದು ವಿಚಾರಣೆಗೆ ಹಾಜರು

Krishnaveni K
ಶುಕ್ರವಾರ, 12 ಜನವರಿ 2024 (10:45 IST)
ಬೆಂಗಳೂರು: ಕಾಟೇರ ಸಿನಿಮಾ ಸಕ್ಸಸ್ ಖುಷಿಯಲ್ಲಿ ಬೆಂಗಳೂರಿನ ಪಬ್ ಒಂದರಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸೇರಿದಂತೆ ನೋಟಿಸ್ ಸಿಕ್ಕ ಎಂಟೂ ಮಂದಿ ಪೊಲೀಸರ ಎದುರು ಹಾಜರಾಗಲಿದ್ದಾರೆ.

ದರ್ಶನ್ ಸೇರಿ 8 ಮಂದಿ ಕಲಾವಿದರಿಗೆ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಆದರೆ ನೋಟಿಸ್ ಬರುವಾಗ ದರ್ಶನ್, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್ ದುಬೈ ಪ್ರವಾಸದಲ್ಲಿದ್ದರು.

ಇದೀಗ ಎಲ್ಲಾ ನಟರೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ದರ್ಶನ್, ರಾಕ್ ಲೈನ್ ವೆಂಕಟೇಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಚಿಕ್ಕಣ್ಣ, ತರುಣ್ ಸುಧೀರ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣಗೆ ನೋಟಿಸ್ ನೀಡಲಾಗಿತ್ತು.

ಇಂದು ಮಧ್ಯಾಹ್ನ 2.30 ಕ್ಕೆ ಈ ಎಲ್ಲಾ ಕಲಾವಿದರೂ ಪೊಲೀಸ್ ಠಾಣೆಗೆ ಬರಲಿದ್ದಾರೆ ಎಂಬ ಮಾಹಿತಿಯಿದೆ. ಕಾಟೇರ ಸಕ್ಸಸ್ ಖುಷಿಯಲ್ಲಿ ಈ ಎಲ್ಲಾ ಸ್ನೇಹಿತರು ಪಾರ್ಟಿ ಮಾಡಿದ್ದರು. ಆದರೆ ನಿಯಮ ಮೀರಿ ರಾತ್ರಿಯಿಡೀ ಪಬ್ ತೆರೆದು ಪಾರ್ಟಿ ಮಾಡಿದ್ದಕ್ಕೆ ಕೇಸ್ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments