Webdunia - Bharat's app for daily news and videos

Install App

ಪಬ್ ನಲ್ಲಿ ಪಾರ್ಟಿ ಕೇಸ್: ದರ್ಶನ್ ಸೇರಿ ಎಲ್ಲಾ ನಟರು ಇಂದು ವಿಚಾರಣೆಗೆ ಹಾಜರು

Krishnaveni K
ಶುಕ್ರವಾರ, 12 ಜನವರಿ 2024 (10:45 IST)
ಬೆಂಗಳೂರು: ಕಾಟೇರ ಸಿನಿಮಾ ಸಕ್ಸಸ್ ಖುಷಿಯಲ್ಲಿ ಬೆಂಗಳೂರಿನ ಪಬ್ ಒಂದರಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸೇರಿದಂತೆ ನೋಟಿಸ್ ಸಿಕ್ಕ ಎಂಟೂ ಮಂದಿ ಪೊಲೀಸರ ಎದುರು ಹಾಜರಾಗಲಿದ್ದಾರೆ.

ದರ್ಶನ್ ಸೇರಿ 8 ಮಂದಿ ಕಲಾವಿದರಿಗೆ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಆದರೆ ನೋಟಿಸ್ ಬರುವಾಗ ದರ್ಶನ್, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್ ದುಬೈ ಪ್ರವಾಸದಲ್ಲಿದ್ದರು.

ಇದೀಗ ಎಲ್ಲಾ ನಟರೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ದರ್ಶನ್, ರಾಕ್ ಲೈನ್ ವೆಂಕಟೇಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಚಿಕ್ಕಣ್ಣ, ತರುಣ್ ಸುಧೀರ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣಗೆ ನೋಟಿಸ್ ನೀಡಲಾಗಿತ್ತು.

ಇಂದು ಮಧ್ಯಾಹ್ನ 2.30 ಕ್ಕೆ ಈ ಎಲ್ಲಾ ಕಲಾವಿದರೂ ಪೊಲೀಸ್ ಠಾಣೆಗೆ ಬರಲಿದ್ದಾರೆ ಎಂಬ ಮಾಹಿತಿಯಿದೆ. ಕಾಟೇರ ಸಕ್ಸಸ್ ಖುಷಿಯಲ್ಲಿ ಈ ಎಲ್ಲಾ ಸ್ನೇಹಿತರು ಪಾರ್ಟಿ ಮಾಡಿದ್ದರು. ಆದರೆ ನಿಯಮ ಮೀರಿ ರಾತ್ರಿಯಿಡೀ ಪಬ್ ತೆರೆದು ಪಾರ್ಟಿ ಮಾಡಿದ್ದಕ್ಕೆ ಕೇಸ್ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments