Webdunia - Bharat's app for daily news and videos

Install App

ನಟ ದರ್ಶನ್ ಗೆ ಸವಾಲಾಗಿರುವ ಎಸ್ ಪಿಪಿ ಪ್ರಸನ್ನಕುಮಾರ್

Krishnaveni K
ಬುಧವಾರ, 9 ಅಕ್ಟೋಬರ್ 2024 (10:02 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಅರ್ಜಿ ಹಾಕಿರುವ ನಟ ದರ್ಶನ್ ಗೆ ಸರ್ಕಾರೀ ಅಭಿಯೋಜಕ ಪ್ರಸನ್ನಕುಮಾರ್ ಸವಾಲಾಗಿ ಪರಿಣಮಿಸಿದ್ದಾರೆ.

ದರ್ಶನ್ ಪರ ವಕೀಲ ಸಿವಿ ನಾಗೇಶ್ ಎತ್ತಿರುವ ಪ್ರಶ್ನೆಗಳಿಗೆ ಎಸ್ ಪಿಪಿ ಪ್ರಸನ್ನಕುಮಾರ್ ನಿನ್ನೆಯಿಂದ ಪ್ರತ್ಯುತ್ತರ ನೀಡುತ್ತಿದ್ದಾರೆ. ದರ್ಶನ್ ಈ ಪ್ರಕರಣದಲ್ಲಿ ಯಾವ ರೀತಿ ಭಾಗಿಯಾಗಿದ್ದರು ಹಾಗೂ ಪೊಲೀಸರು ನೀಡಿರುವ ಸಾಕ್ಷ್ಯಗಳು ಎಷ್ಟು ಪ್ರಬಲವಾಗಿದೆ ಎಂದು ಪ್ರಸನ್ನಕುಮಾರ್ ವಾದಿಸುತ್ತಿದ್ದಾರೆ.

ನಿನ್ನೆ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದೂ ಪ್ರಸನ್ನಕುಮಾರ್ ವಾದ ಮಂಡನೆ ಮುಂದುವರಿಯಲಿದೆ. ಸಿವಿ ನಾಗೇಶ್ ಎತ್ತಿರುವ ಸವಾಲುಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿರುವ ಪ್ರಸನ್ನಕುಮಾರ್ ನಟ ದರ್ಶನ್ ಪಾಲಿಗೆ ಅಕ್ಷರಶಃ ಸವಾಲಾಗಿದ್ದಾರೆ. ಇದರಿಂದಾಗಿ ಅವರಿಗೆ ಜಾಮೀನು ಸಿಗುವುದು ಕಷ್ಟವಾಗುತ್ತಿದೆ.

ಇನ್ನೊಂದೆಡೆ ದರ್ಶನ್ ವಿರುದ್ಧ ಪೊಲೀಸರು ಸಂಗ್ರಹಿಸಿರುವ ಸಾಕ್ಷ್ಯ ಪ್ರಬಲವಾಗಿದ್ದು, ಇದು ಅವರನ್ನು ಸಂಕಷ್ಟಕ್ಕೆ ದೂಡಿದೆ. ದಸರಾ ವೇಳೆಗೆ ದರ್ಶನ್ ಬಿಡುಗಡೆಯಾಗಬಹುದು ಎಂದು ಕಾದಿದ್ದ ಫ್ಯಾನ್ಸ್ ಗೆ ನಿರಾಸೆಯಾಗಿದೆ. ಒಂದು ವೇಳೆ ಇಂದು ಪ್ರಸನ್ನಕುಮಾರ್ ವಾದ ಮಂಡನೆ ಮುಗಿದರೂ ತೀರ್ಪು ಇಂದೇ ಬರಬಹುದು ಎಂದು ಹೇಳಲಾಗದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments