41ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ದರ್ಶನ್; ಯುವಕರಿಗೆ ನೀಡಿದ ಸಲಹೆ ಏನು...?

Webdunia
ಶುಕ್ರವಾರ, 16 ಫೆಬ್ರವರಿ 2018 (09:14 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ 41ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ರಾಜರಾಜೇಶ್ವರಿ ನಗರದಲ್ಲಿರೋ ತಮ್ಮ ನಿವಾಸದಲ್ಲಿ ಶುಕ್ರವಾರ (ಇಂದು ) ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡಿದ್ದಾರೆ.


ಕುಟುಂಬದ ಸದಸ್ಯರು, ತಮ್ಮ ದಿನಾಕರ್ ತೂಗುದೀಪ, ಕಾಮಿಡಿ ಸ್ಟಾರ್ ಸೃಜನ್ ಲೋಕೇಶ್, ವಿನೋದ್ ಪ್ರಭಾಕರ್, ರವಿಚೇತನ್, ತರುಣ್ ಸುಧೀರ್ ಇತರ ನಟರು ದರ್ಶನ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಅಲ್ಲದೆ ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು ಆಗಮಿಸಿದ್ದು, ಸರತಿ ಸಾಲಲ್ಲಿ ಕಾದು ನಿಂತು, ತಮ್ಮ ನೆಚ್ಚಿನ ನಟನಿಗೆ ಶುಭಾಶಯಗಳನ್ನ ಸಲ್ಲಿಸಿದ್ದಾರೆ.


ಈ ಸಂದರ್ಭದಲ್ಲಿ ಅಭಿಮಾನಿಗಳ ಕುರಿತು ಮಾತನಾಡಿದ ದರ್ಶನ್ ಅವರು, ‘ಅಭಿಮಾನಿಗಳೇ ನನಗೆಲ್ಲಾ ಸ್ನೇಹಿತರು ದಿನಾ ಸಿಗುತ್ತಾರೆ. ಅಭಿಮಾನಿಗಳು ಇವತ್ತು ಮಾತ್ರ ಸಿಗುತ್ತಾರೆ. ಅವರಿಗೋಸ್ಕರ ಅವರ ಜೊತೆ ಇರುತ್ತೀನಿ. ನಾನಾ ಜಿಲ್ಲೆಗಳಿಂದ ಬಂದು ಶುಭ ಹಾರೈಸಲು ಬಂದಿರೋ ಅಭಿಮಾನಿಗಳಿಗೆ ನಾನು ಚಿರುಋಣಿಯಾಗಿರುತ್ತೀನಿ. ಯುವಕರಿಗೆ ನಾನಿಷ್ಟೇ ಹೇಳಲು ಬಯಸುತ್ತೇನೆ. ಅದೇನೆಂದ್ರೆ ಟೈಂ ಇಂಪಾರ್ಟೆಂಟ್.. ಟೈಂ ವೇಸ್ಟ್ ಮಾಡಬೇಡಿ.. ಎಂದು ಹೇಳಿ ಇನ್ನೂ ಒಳ್ಳೋಳ್ಳೆ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments