Webdunia - Bharat's app for daily news and videos

Install App

ಬಾಸ್‌ ಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ಕಿರು ನಗೆ ಬೀರಿದ ನಟ ದರ್ಶನ್

Sampriya
ಸೋಮವಾರ, 30 ಸೆಪ್ಟಂಬರ್ 2024 (17:24 IST)
ಬಳ್ಳಾರಿ: ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ ಮಾತನಾಡಿಸಲು ಸಂದರ್ಶಕರ ಕೊಠಡಿಗೆ ಬರುತ್ತಿದ್ದ ನಟ ದರ್ಶನ್‌ರನ್ನು ಗೇಟ್‌ನ ಹೊರಗಡೆ ಕಾದು ನಿಂತಿದ್ದ ಫ್ಯಾನ್ಸ್‌ ನೋಡಿ ಖುಷಿ ಪಟ್ಟಿದ್ದಾರೆ.

ದರ್ಶನ್ ಅವರು ಸೆಲ್‌ನಿಂದ ಹೊರಗಡೆ ಬರುತ್ತಿದ್ದ ಹಾಗೇ ಫ್ಯಾನ್ಸ್‌ ಒಬ್ಬರು ದೇವರು ಬಂದರು ಎಂದು ಕೂಗಿದ್ದಾರೆ. ಅದಲ್ಲದೆ ಡಿ ಬಾಸ್‌ಗೆ ಜೈ ಎಂದು ಕೂಗಿದ್ದಾರೆ. ಇದನ್ನು ಕೇಳಿಸುತ್ತಿದ್ದ ಹಾಗೇ ದರ್ಶನ್ ಅವರು ಫ್ಯಾನ್ಸ್‌ನತ್ತ ನೋಡುತ್ತಾ ಕಿರುನಗೆ ಬೀರಿ ಸಂದರ್ಶಕರ ಕೊಠಡಿಯೊಳಗೆ ಹೋಗಿದ್ದಾರೆ. 

ಇನ್ನು ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ನಿರಾಸೆಯಾಗಿದ್ದು, ಇದರ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್, ಆಪ್ತ ಧನ್ವೀರ್ ಅವರು ಜೈಲಿಗೆ ಭೇಟಿ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರ ಪರ ವಕೀಲ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ. ದರ್ಶನ್‌ ಭೇಟಿಗೆ ಬರುವಾಗ ಪತ್ನಿ ವಿಜಯಲಕ್ಷ್ಮೀ ಅವರು ಬಟ್ಟೆ, ಡ್ರೈ ಪ್ರೂಟ್ಸ್‌, ಬಿಸ್ಕೆಟ್ ಅನ್ನು ತಂದಿದ್ದಾರೆ.  ಭೇಟಿ ಸಂದರ್ಭದಲ್ಲಿ  ದರ್ಶನ್‌ಗೆ ಧೈರ್ಯ ತುಂಬಿದ ವಿಜಯಲಕ್ಷ್ಮಿ ಅವರು ಮುಂದಿನ ಕಾನೂನು ಹೋರಾಟದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments