Webdunia - Bharat's app for daily news and videos

Install App

ನಟ ದರ್ಶನ್‌ಗೆ ಜಾಮೀನು ಮಂಜೂರು: ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

Sampriya
ಶುಕ್ರವಾರ, 13 ಡಿಸೆಂಬರ್ 2024 (15:44 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು ಜಾಮೀನು ಮಂಜೂರು ಮಾಡುತ್ತಿದ್ದ ಹಾಗೇ ಪತ್ನಿ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ದರ್ಶನ್ ಈಗಾಗಲೇ ಮಧ್ಯಂತರ ಜಾಮೀನು ಅಡಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಪತಿಯನ್ನು ಈ ಪ್ರಕರಣದಿಂದ ಹೊರತರಲು ವಿಜಯಲಕ್ಷ್ಮಿ ಸತತ ಕಾನೂನು ಹೋರಾಟದ ಜತೆಗೆ ದೇವರ ಮೊರೆ ಹೋಗಿದ್ದರು.

ಅಂದು ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ ಅವರು ಬಳ್ಳಾರಿಯ ಫವರ್ ಫುಲ್ ದೇವಿಯ ದರ್ಶನ ಪಡೆದು  ದರ್ಶನ್‌ರನ್ನು ಜೈಲಿನಿಂದ ಹೊರತಂದಿದ್ದರು.  ಅದಲ್ಲದೆ ದರ್ಶನ್ ಈ ಪ್ರಕರಣದಿಂದ ಬೇಗ ಹೊರಬರಲೆಂದು ಚಾಮುಂಡೇಶ್ವರಿ, ಕೊಲ್ಲೂರು ಮೂಕಾಂಬಿಕೆ ದೇವಿ, ಕಾಮಾಕ್ಯ ದೇವಿ, ಮಂತ್ರಾಲಯ ಹೀಗೇ ಹಲವು ಫವರ್ ಫುಲ್ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು.

ಇದೀಗ ದರ್ಶನ್‌ಗೆ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಆಗುತ್ತಿದ್ದ ಹಾಗೇ, ವಿಜಯಲಕ್ಷ್ಮಿ ಅವರು ಇನ್‌ಸ್ಟಾಗ್ರಾಂನಲ್ಲಿ ದೇವರ ಸನ್ನಿಧಿಯಲ್ಲಿ ಕೈಯಲ್ಲಿ ಹೂ ಹಿಡಿದು ಸಮರ್ಪಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ನಮೋ ನಮೋ ಶಂಕರ ಎಂದು ಅದಕ್ಕೆ ಹಾಡನ್ನು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments