‘ಏಳಿಗೆಯನ್ನು ಸಹಿಸಲಾಗದವರಿಗೆ..’: ದರ್ಶನ್ ಹೀಗಂದಿದ್ದು ಯಾರಿಗೆ?

Krishnaveni K
ಬುಧವಾರ, 10 ಜನವರಿ 2024 (09:30 IST)
ಬೆಂಗಳೂರು: ಕಾಟೇರ ಸಿನಿಮಾದ ಪ್ರದರ್ಶನಕ್ಕಾಗಿ ದುಬೈಗೆ ತೆರಳಿರುವ ನಟ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಫೋಟೋ ಮತ್ತು ಅದರ ಜೊತೆಗೆ ಅವರು ಬರೆದಿದ್ದ ಸಂದೇಶ ಎಲ್ಲರ ಗಮನ ಸೆಳೆದಿದೆ.

ದುಬೈನಲ್ಲಿ ಅಲ್ಲಿನ ಕನ್ನಡಿಗ ಸ್ನೇಹಿತರ ಜೊತೆ ದರ್ಶನ್ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಅವರ ವಿರುದ್ಧ ಪಬ್ ನಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ್ದಕ್ಕೆ ಕೇಸ್ ದಾಖಲಾಗಿದೆ. ದರ್ಶನ್ ಸೇರಿದಂತೆ ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ನೀನಾಸಂ ಸತೀಶ್, ರಾಕ್ ಲೈನ್ ವೆಂಕಟೇಶ್, ಡಾಲಿ ದನಂಜಯ್ ಸೇರಿದಂತೆ 8 ಮಂದಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಆದರೆ ದರ್ಶನ್ ಸದ್ಯಕ್ಕೆ ದುಬೈನಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಲಾಗುತ್ತಿಲ್ಲ. ಆದರೆ ಈ ಬೆಳವಣಿಗೆ ಅವರ ಕಿವಿಗೂ ಬಿದ್ದಿದೆ. ಹೀಗಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಅವರು ಖಡಕ್ ಸಂದೇಶವೊಂದನ್ನು ಬರೆದಿದ್ದಾರೆ.

‘ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಅಭಾರಿಯಾಗಿದ್ದೇನೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ  ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡಿಕೊಳ್ಳಲ್ಲ, ಬೇಜಾರು ಮಾಡ್ಕೊಳ್ಳಲ್ಲ, ನೊಂದುಕೊಳ‍್ಳಲ್ಲ, ಕಾಲಾಯ ತಸ್ಮೈ ನಮಃ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಟೋ ಚಾಲಕರ ಸಂಕಷ್ಟಕ್ಕೆ ಮರುಗಿದ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಮಾಡಿದ್ದೇನು ಗೊತ್ತಾ

ಅಕ್ಕ ಒಮ್ಮೆ ಹೇಳಿದ್ಳು ಎಲ್ರೂ ಬಿಟ್ಟು ಹೋದ್ರು... ಆಶಾ ಭೋಸ್ಲೆಯವರ ಈ ವಿಡಿಯೋ ಈಗ ವೈರಲ್ Video

ಆಶಾ ಭೋಸ್ಲೆಯವರ ಟಾಪ್ 5 ಹಾಡುಗಳು ಮತ್ತು ಅದಕ್ಕಿರುವ ಒಂದು ಕನೆಕ್ಷನ್ ಏನು ಗೊತ್ತಾ

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಡ್ರಗ್ಸ್‌ ಕುರಿತು ಜಾಗೃತಿ ಮೂಡಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ರಾ ದುನಿಯಾ ವಿಜಯ್

ಮುಂದಿನ ಸುದ್ದಿ
Show comments