Webdunia - Bharat's app for daily news and videos

Install App

Darshan: ನನಗೆ ಬೆನ್ನು ನೋವಿದೆ ಕೋರ್ಟ್ ಗೆ ಬರಕ್ಕಾಗಲ್ಲ ಎಂದ ದರ್ಶನ್ ಗೆ ಕೋರ್ಟ್ ಕ್ಲಾಸ್

Krishnaveni K
ಮಂಗಳವಾರ, 8 ಏಪ್ರಿಲ್ 2025 (12:32 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಇಂದು ಕೋರ್ಟ್ ಗೆ ಹಾಜರಾಗಬೇಕಿತ್ತು. ಆದರೆ ಬೆನ್ನು ನೋವಿನ ನೆಪವೊಡ್ಡಿ ಬರಲಾಗುವುದಿಲ್ಲ ಎಂದ ದರ್ಶನ್ ಗೆ ಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ.

ಜಾಮೀನಿನ ಮೇಲೆ ಹೊರಗಿರುವ ಎಲ್ಲಾ 17 ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಬೇಕಿತ್ತು. ಆದರೆ ನಟ ದರ್ಶನ್ ನನಗೆ ಬೆನ್ನು ನೋವಿದೆ ಕೋರ್ಟ್ ಗೆ ಬರಲು ಆಗುವುದಿಲ್ಲ ಎಂದು ವಕೀಲರ ಮೂಲಕ ನ್ಯಾಯಾಲಯಕ್ಕೆ ಕೇಳಿದ್ದರು.

ಆದರೆ ಇಂದು ನಟ ದರ್ಶನ್ ಗೈರಾಗಿರುವುದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಆರೋಪಿಗಳೂ ನಿಗದಿತ ದಿನಕ್ಕೆ ಕೋರ್ಟ್ ಗೆ ಕಡ್ಡಾಯವಾಗಿ ಹಾಜರಾಗಲೇಬೇಕು ಎಂದು ನ್ಯಾಯಾಧೀಶರು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮೊನ್ನೆಯಷ್ಟೇ ನಟ ದರ್ಶನ್ ರಾಜಸ್ಥಾನ್ ನಿಂದ ಡೆವಿಲ್ ಶೂಟಿಂಗ್ ಮುಗಿಸಿ ಬಂದಿದ್ದರು. ಆದರೆ ಈಗ ವಿಚಾರಣೆಗೆ ಹಾಜರಾಗಲಾಗದಷ್ಟು ಬೆನ್ನು ನೋವಿದೆಯೇ ಎಂಬ ಅಚ್ಚರಿ ಮೂಡಿದೆ. ಸತತ ಶೂಟಿಂಗ್ ಮಾಡಿದ್ದರಿಂದ ಬೆನ್ನು ನೋವು ಉಲ್ಬಣವಾಗಿದೆ ಎಂದು ವಕೀಲರು ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಉಳಿದಂತೆ ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ಈ ವೇಳೆ ಆರೋಪಿಗಳು ತಮ್ಮ ಮೊಬೈಲ್ ಮರಳಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments