ನ್ಯಾಯಾಧೀಶರ ಮುಂದೆ ಶಾಕಿಂಗ್ ಬೇಡಿಕೆಯಿಟ್ಟ ನಟ ದರ್ಶನ್

Krishnaveni K
ಮಂಗಳವಾರ, 9 ಸೆಪ್ಟಂಬರ್ 2025 (12:05 IST)
ಬೆಂಗಳೂರು: ಜೈಲಿನಲ್ಲಿ ನರಕ ದರ್ಶನ ಅನುಭವಿಸುತ್ತಿರುವ ನಟ ದರ್ಶನ್ ಈಗ ನ್ಯಾಯಾಧೀಶರ ಮುಂದೆ ಶಾಕಿಂಗ್ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇಂದು ನಟ ದರ್ಶನ್ ಹಾಸಿಗೆ, ದಿಂಬು ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಜರಾಗಿದ್ದಾರೆ. ಈ ವೇಳೆ ದರ್ಶನ್ ಗೆ ಮಾತನಾಡಲು ನ್ಯಾಯಾಧೀಶರು ಅವಕಾಶ ಮಾಡಿಕೊಡುತ್ತಾರೆ.

ಈ ಸಂದರ್ಭದಲ್ಲಿ ದರ್ಶನ್ ನನಗೆ ಒಂದು ವಿಚಾರ ಹೇಳುವುದಿದೆ ಎಂದಿದ್ದಾರೆ. ಏನು ಎಂದು ಕೇಳಿದ್ದಕ್ಕೆ ಬಿಸಿಲು ನೋಡಿ ಒಂದು ತಿಂಗಳಾಯಿತು. ನನಗೆ ಸ್ವಲ್ಪ ವಿಷ ಕೊಡಿ ಎಂದು ಬೇಸರದಿಂದಲೇ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕೈ ಎಲ್ಲಾ ಫಂಗಸ್ ಆಗಿದೆ ಎಂದು ಬೇಸರಿಸಿಕೊಂಡಿದ್ದಾರೆ. ಇನ್ನು ದರ್ಶನ್ ಗೆ ಈ ಸಂದರ್ಭದಲ್ಲಿ ನ್ಯಾಯಾಧೀಶರು ಆ ರೀತಿ ಹೇಳಬಾರದು ಎಂದು ತಿಳಿಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದಲೇ ದರ್ಶನ್ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಯಾವ ಪರಿ ನರಕ ದರ್ಶನ ವಾಗುತ್ತಿದೆ ಎಂದು ತಿಳಿದುಬರುತ್ತದೆ. ಸುಪ್ರೀಂಕೋರ್ಟ್ ನಿರ್ದೇಶನದ ಬಳಿಕ ಜೈಲು ಅಧಿಕಾರಿಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಇದು ದರ್ಶನ್ ಗೆ ಉಸಿರುಕಟ್ಟಿದಂತಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮುಂದಿನ ಸುದ್ದಿ
Show comments