Webdunia - Bharat's app for daily news and videos

Install App

ಜೈಲಿನಲ್ಲಿ ದರ್ಶನ್ ಗೆ ಚಳಿ ಜ್ವರ, ಆದ್ರೂ ಡೋಂಟ್ ಕೇರ್

Krishnaveni K
ಶನಿವಾರ, 20 ಜುಲೈ 2024 (10:23 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಚಳಿ ಜ್ವರ ಶುರುವಾಗಿದೆ. ಆದರೂ ಅವರು ತಲೆಯೇ ಕೆಡಿಸಿಕೊಳ್ಳದೇ ಧೈರ್ಯವಾಗಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ದಿನಗಳಿಂದ ದರ್ಶನ್ ಗೆ ಜ್ವರ ಕಾಡುತ್ತಿದೆ. ಬದಲಾದ ಹವಾಮಾನ ಮತ್ತು ಆಹಾರ ಶೈಲಿಯಿಂದಾಗಿ ದರ್ಶನ್ ಗೆ ವೈರಲ್ ಜ್ವರವಾಗಿದೆ. ಸದ್ಯಕ್ಕೆ ಅವರು ಜೈಲಿನ ವೈದ್ಯಾಧಿಕಾರಿಗಳಿಂದಲೇ ತಪಾಸಣೆಗೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯಕ್ಕೆ ಅವರ ಜ್ವರ ಕಡಿಮೆಯಾಗಿದ್ದು ಸುಧಾರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯಿದೆ.

ನಿನ್ನೆ ಜೈಲಿಗೆ ಭೇಟಿ ನೀಡಿದ್ದ ನಿರ್ದೇಶಕ ತರುಣ್ ಸುಧೀರ್ ಕೂಡಾ ಜ್ವರ ಕಡಿಮೆಯಾಗಿದ್ದು ಆರಾಮವಾಗುತ್ತಿದ್ದಾರೆ ಎಂದಿದ್ದರು. ಇನ್ನು ಜೈಲಿನ ಊಟ ಸರಿಯಿಲ್ಲ ಎಂದು ಮನೆ ಊಟಕ್ಕೆ ಅರ್ಜಿ ಸಲ್ಲಿಸಿದ್ದ ದರ್ಶನ್ ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಆದೇಶಿಸಿತ್ತು.

ಅದರಂತೆ ಈಗ ಮನೆ ಊಟಕ್ಕಾಗಿ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಬೇಕಾಗಿದೆ. ಇದೇ ವಾರದೊಳಗೆ ಈ ಮನವಿಯ ತೀರ್ಪು ಬರುವ ನಿರೀಕ್ಷೆಯಿದೆ. ಆಗಸ್ಟ್ 1 ರವರೆಗೆ ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅದಾದ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments