Select Your Language

Notifications

webdunia
webdunia
webdunia
webdunia

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅಭಿಮಾನಿಗಳಿಗೆ ನಿರಾಸೆ

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅಭಿಮಾನಿಗಳಿಗೆ ನಿರಾಸೆ

Sampriya

ಬಳ್ಳಾರಿ , ಸೋಮವಾರ, 30 ಸೆಪ್ಟಂಬರ್ 2024 (15:21 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡಗೆ ನಿರಾಸೆಯಾಗಿದೆ.  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಸೇರಿದ್ದಾರೆ. ಇಂದು  ಬೆಂಗಳೂರಿನ ಸೆಷನ್‌ ಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಇದೀಗ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಮೂರನೇ ಬಾರಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಈಗಾಗಲೇ ಪ್ರಕರಣ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಇಂದು ದರ್ಶನ್‌ಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗು ನಿರಾಸೆಯಾಗಿದೆ.

ದರ್ಶನ್ ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಅವರು ಪ್ರತಿ ಸೋಮವಾರ ಪತಿಯನ್ನು ಭೇಟಿಯಾಗಿ, ಧೈರ್ಯ ಹೇಳುತ್ತಿದ್ದಾರೆ. ಇಂದು ಜಾಮೀನು ಅರ್ಜಿ ಮುಂದೂಡಿಕೆಯಾದ ಹಿನ್ನೆಲೆ ವಿಜಯಲಕ್ಷ್ಮಿ ಅವರು ಜೈಲಿಗೆ ಆಗಮಿಸುವ ಸಾಧ್ಯತೆಯಿದೆ. ಈ ವೇಳೆ ಮುಂದಿನ ಕಾನೂನು ಹೋರಾಟದ ಬಗ್ಗೆ ದರ್ಶನ್ ಜತೆ ಚರ್ಚಿಸುವ ಸಾಧ್ಯತೆಯಿದೆ.

ಇನ್ನು ಸೆಪ್ಟೆಂಬರ್‌ 30ರಂದು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಇಬ್ಬರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಜನಪ್ರತಿನಿಧಿನಿಗಳ ವಿಶೇಷ ಕೋರ್ಟ್ ಮುಂದೂಡಿ ಆದೇಶ ಹೊರಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

350 ಸಿನಿಮಾಗಳಲ್ಲಿ ನಟಿಸಿದ್ದ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ