Webdunia - Bharat's app for daily news and videos

Install App

ಬೆನ್ನು ನೋವಿದ್ದರೂ ನಟ ದರ್ಶನ್ ಬಳ್ಳಾರಿಯಲ್ಲಿ ಚಿಕಿತ್ಸೆ ಬೇಡ ಅಂತಿರೋದು ಯಾಕೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (17:00 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ತೀವ್ರ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಹಾಗಿದ್ದರೂ ಅವರು ಅಲ್ಲಿ ಚಿಕಿತ್ಸೆ ನಿರಾಕರಿಸುತ್ತಿದ್ದಾರೆ.

ನಟ ದರ್ಶನ್ ರನ್ನು ಇದು ಎರಡನೇ ಬಾರಿಗೆ ವೈದ್ಯರು ಬಳ್ಳಾರಿ ಜೈಲಿನಲ್ಲಿ ತಪಾಸಣೆ ನಡೆಸಿದರು. ದರ್ಶನ್ ತಪಾಸಣೆ ನಡೆಸಿದ ವೈದ್ಯರು ಸ್ಕ್ಯಾನಿಂಗ್ ನಡೆಸಲು ಸೂಚಿಸಿದ್ದರು. ಅಲ್ಲದೆ, ಬೆನ್ನಿನಲ್ಲಿ ಊತವಾಗಿದೆ ಎಂದಿದ್ದರು. ಆದರೆ ಸ್ಕ್ಯಾನಿಂಗ್ ನಡೆಸಲು ದರ್ಶನ್ ಒಪ್ಪಿಲ್ಲ. ಜೊತೆಗೆ ಬಳ್ಳಾರಿಯಲ್ಲಿ ಚಿಕಿತ್ಸೆಗೂ ಒಪ್ಪಿಲ್ಲ.

ನಾನು ಬೆಂಗಳೂರಿಗೆ ಹೋದ ಮೇಲೆ ಅಲ್ಲಿಯೇ ತಪಾಸಣೆ ನಡೆಸಿ ಶಸ್ತ್ರಿಚಿಕಿತ್ಸೆ ನಡೆಸಿಕೊಳ್ಳುವುದಾಗಿ ದರ್ಶನ್ ಹೇಳುತ್ತಿದ್ದಾರೆ. ಏನೇ ಆದರೂ ದರ್ಶನ್ ಬಳ್ಳಾರಿಯಲ್ಲಿ ಚಿಕಿತ್ಸೆಗೆ ಒಪ್ಪದೇ ಇರುವುದಕ್ಕೆ ಕಾರಣವೂ ಇದೆ ಎನ್ನಲಾಗುತ್ತಿದೆ. ದರ್ಶನ್ ಸದ್ಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಬಿಡುಗಡೆಯಾದರೆ ತಮ್ಮ ವೈದ್ಯರ ಬಳಿಯೇ ಚಿಕಿತ್ಸೆ ಪಡೆಯುವ ಉದ್ದೇಶ ಅವರದ್ದಾಗಿದೆ.

ಇನ್ನೊಂದು ಇದೇ ಬೆನ್ನು ನೋವಿನ ವಿಚಾರವೇ ಅವರಿಗೆ ಜಾಮೀನು ಪಡೆಯಲೂ ಸುಲಭವಾಗಬಹುದು. ಒಂದು ವೇಳೆ ಜಾಮೀನು ಈಗಲೇ ಸಿಗದೇ ಇದ್ದರೂ ಚಿಕಿತ್ಸೆಯ ನೆಪದಲ್ಲಾದರೂ ಅವರನ್ನು ಬೆಂಗಳೂರಿನ ಜೈಲಿಗೆ ಶಿಫ್ಟ್ ಮಾಡಬಹುದು ಎಂಬ ಲೆಕ್ಕಾಚಾರಗಳಿವೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments