Webdunia - Bharat's app for daily news and videos

Install App

ತಮ್ಮ ಹುಟ್ಟುಹಬ್ಬ ದಿನವಾದ ಇಂದು ಒಂದೊಳ್ಳೆ ಕೆಲಸ ಮಾಡಿದ ನಟ ಧನಂಜಯ್

Webdunia
ಗುರುವಾರ, 23 ಆಗಸ್ಟ್ 2018 (15:00 IST)
ಬೆಂಗಳೂರು : ಹೆಚ್ಚಾಗಿ  ಸೆಲೆಬ್ರಿಟಿಗಳು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಮೂಲಕ ಸಂಭ್ರಮಪಡುತ್ತಾರೆ. ಆದರೆ ಸ್ಯಾಂಡಲ್ ವುಡ್ ನಟ ಧನಂಜಯ್ ಮಾತ್ರ ತಮ್ಮ ಹುಟ್ಟುಹಬ್ಬ ದಿನದಂದು ಒಂದೊಳ್ಳೆ ಕೆಲಸ ಮಾಡುವುದರ ಮೂಲಕ ಸಂಭ್ರಮಗೊಂಡಿದ್ದಾರೆ.


ಹೌದು ಇಂದು ನಟ ಡಾಲಿ ಧನಂಜಯ್  ಅವರ ಜನ್ಮದಿನ. ಆದರೆ ಕೊಡಗು ನಲ್ಲಿ ನಡೆದ ಅನಾಹುತ ಕಂಡು ನೊಂದ ನಟ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬಾರದೆಂದು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳಿಗೆ ಬೇಸರಮಾಡಬಾರದು ಎಂಬ ಕಾರಣಕ್ಕೆ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದರು.


ಇಂದು ಅಭಿಮಾನಿಗಳನ್ನು ಭೇಟಿ  ಮಾಡಿದ ನಟ ಧನಂಜಯ್ ಅಭಿಮಾನಿಗಳಿಂದ ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಹಣ ಸಂಗ್ರಹಿಸುವ ಮೂಲಕ ತಮ್ಮ ಜನುಮದಿನವನ್ನ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ . ಈ ರೀತಿ ತಮ್ಮ ಹುಟ್ಟಿದ ಹಬ್ಬವನ್ನ ಆಚರಿಸಿಕೊಂಡ ನಟನನ್ನು ಕಂಡು ಅಭಿಮಾನಿಗಳಿಗೂ ತುಂಬಾ ಸಂತೋಷವಾಗಿದೆ. ಜೊತೆಗೆ ತಮ್ಮ ನೆಚ್ಚಿನ ನಟನಿಗೆ ಶುಭಾಶೇಯ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments