Webdunia - Bharat's app for daily news and videos

Install App

2 ಗಂಟೆ ಕಾದು ಕುಳಿತ ನಟ ಧನ್ವೀರ್‌ ಭೇಟಿಗೆ ನೋ ಎಂದ್ರಾ ದಾಸ

Sampriya
ಮಂಗಳವಾರ, 2 ಜುಲೈ 2024 (15:08 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ​ ದರ್ಶನ್ ಅವರನ್ನು ಭೇಟಿಯಾಗಲು ತಾರೆಯರು ಆಗಮಿಸುತ್ತಿದ್ದಾರೆ.

ಅದರಂತೆ ಇಂದು ದರ್ಶನ್ ಅವರ ಆಪ್ತ, ನಟ ಧನ್ವೀರ್ ಆಗಮಿಸಿದ್ದಾರೆ. ಆದರೆ ಅವರಿಗೆ ಜೈಲಿನೊಳಗೆ ಎಂಟ್ರಿ ಸಿಕ್ಕಿಲ್ಲ ಎಂಬ ಮಾಹಿತಿಯಿದೆ. ಇದರಿಂದ ನಟ ದರ್ಶನ್​ ಭೇಟಿ ಅವರಿಗೆ ಸಾಧ್ಯವಾಗಿಲ್ಲ. ಇನ್ನೂ ಕಳೆದ ಕೆಲ ದಿನಗಳಿಂದ ದರ್ಶನ್ ಅವರನ್ನು ಭೇಟಿಯಾಗಲು ಅವರ ಅಭಿಮಾನಿಗಳು, ಆಪ್ತ ವಲಯದವರು ಪರಪ್ಪನ ಅಗ್ರಹಾರದತ್ತ ಬರುತ್ತಿದ್ದಾರೆ. ಆದರೆ ಜೈಲು ಅಧಿಕಾರಿಗಳು ಅವರ ಕುಟುಂಬದವರಿಗೆ ಮಾತ್ರ ಅವಕಾಶವನ್ನು ನೀಡಿದ್ದಾರೆ.

ನಿನ್ನೆ ದರ್ಶನ್ ಅವರ ತಾಯಿ, ಸಹೋದರ ದಿನಕರ್ ತೂಗುದೀಪ, ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.  ಇಂದು ಪರಪ್ಪನ ಅಗ್ರಹಾರ ಜೈಲು ಒಳಕ್ಕೆ ಹೋಗಲು ಧನ್ವೀರ್ ಕಾರಿನಲ್ಲಿ ಬಂದಿದ್ದಾರೆ. ಆದರೆ ಈ ವೇಳೆ ಜೈಲು ಸಿಬ್ಬಂದಿ ಅವರ ಕಾರನ್ನು ತಡೆದು ನಿಲ್ಲಿಸಿದ್ದಾರೆ.

ಬಳಿಕ ಧನ್ವೀರ್​ ದರ್ಶನ್​ ಭೇಟಿಗಾಗಿ ಕಾದು ಕುಂತಿದ್ದಾರೆ. ದರ್ಶನ್ ಭೇಟಿಗೆ ಸಮ್ಮತಿಸಿದರೆ ಒಳಗೆ ಹೋಗಲು ಕಾದಿದ್ದಾರೆ. ಆದರೆ ಕೊಂಚ ಸಮಯದ ಬಳಿಕ ಕಾರಿನಿಂದ ಕೆಳಗಿಳಿದ ನಟ ಜೈಲಿನ ಬಳಿ ನಡೆದುಕೊಂಡು ಹೋಗಿದ್ದಾರೆ.

ಮಾಹಿತಿ ಪ್ರಕಾರ ಧನ್ವೀರ್​ 2 ಗಂಟೆಗಳ ಕಾಲ ದರ್ಶನ್​ ಭೇಟಿಗಾಗಿ ಕಾದಿದ್ದಾರೆ. ನಂತರ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.. ಇದಲ್ಲದೆ, ನಟ ವಿನೋದ್​ ಪ್ರಭಾಕರ್​, ಜೋಗಿ ಪ್ರೇಮ್​, ರಕ್ಷಿತಾ ಪ್ರೇಮ್​ ಸೇರಿ ಕೆಲವರು ಈಗಾಗಲೇ ದರ್ಶನ್​ರನ್ನು ಭೇಟಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments