Webdunia - Bharat's app for daily news and videos

Install App

ನಾನು ಪಕ್ಕಾ ಹಿಂದೂ, ಹಸು ಕೆಚ್ಚಲು ಕೊಯ್ದವನಿಗೆ...: ನಟ ಧ್ರುವ ಸರ್ಜಾ ಖಡಕ್ ಪ್ರತಿಕ್ರಿಯೆ

Krishnaveni K
ಸೋಮವಾರ, 13 ಜನವರಿ 2025 (15:08 IST)
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ವಿಕೃತಿ ಮೆರೆದ ಘಟನೆ ಬಗ್ಗೆ ನಟ ಧ್ರುವ ಸರ್ಜಾ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಕಾ ಹಿಂದೂ ಎಂದಿದ್ದಾರೆ.

ಚಾಮರಾಜಪೇಟೆಯಲ್ಲಿ ಶನಿವಾರ ತಡರಾತ್ರಿ ಕರ್ಣ ಎಂಬವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕುಯ್ದು ಕಾಲಿಗೆ ಮಚ್ಚಿನ ಹಲ್ಲೆ ಮಾಡಿ ಗಾಯಗೊಳಿಸಿ ವಿಕೃತಿ ಮೆರೆಯಲಾಗಿತ್ತು. ಈ ಘಟನೆ ದೇಶದಾದ್ಯಂತ ಗಮನ ಸೆಳೆದಿದೆ.

ಇದರ ಬಗ್ಗೆ ಖಾಸಗಿ ವಾಹಿನಿಗೆ ಪ್ರತಿಕ್ರಿಯಿಸಿರುವ ನಟ ಧ್ರುವ ಸರ್ಜಾ, ‘ಇಂತಹ ವಿಚಾರದ ಬಗ್ಗೆ ವಿಚಾರಣೆ ಹಂತದಲ್ಲಿರುವಾಗ ಏನು ಹೇಳಲು ಸಾಧ್ಯ? ಆದರೆ ಒಂದು ವಿಚಾರ ಪ್ರಾಮಾಣಿಕವಾಗಿ ಹೇಳ್ತೀನಿ. ನಾನು ಪಕ್ಕಾ ಹಿಂದೂ. ಹಸುವಿನ ಮೇಲೆ ಕ್ರೌರ್ಯ ನಡೆಸಿದವರಿಗೆ ಕಾನೂನಿನ ಪ್ರಕಾರ ಏನು ಕಠಿಣ ಶಿಕ್ಷೆ ಕೊಡ್ತಾರೋ ಕೊಡಲಿ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಪ್ರಾಣಿ ಪ್ರಿಯನಾಗಿ ಇಂತಹದ್ದೊಂದು ಘಟನೆ ಬಗ್ಗೆ ಕೇಳಿದಾಗ ನಿಜಕ್ಕೂ ಬೇಸರವಾಗುತ್ತದೆ. ಇಂತಹ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಸಿಗಬೇಕು ಎಂದು ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments