Webdunia - Bharat's app for daily news and videos

Install App

ನಟ ದಿಲೀಪ್ ಗೆ ಹೈಕೋರ್ಟ್ ನಲ್ಲೂ ಸಿಗಲಿಲ್ಲ ಬಿಡುಗಡೆಯ ಭಾಗ್ಯ

Webdunia
ಸೋಮವಾರ, 24 ಜುಲೈ 2017 (11:05 IST)
ಕೊಚ್ಚಿ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮಲಯಾಳಂ ನಟ ದಿಲೀಪ್ ಗೆ ಇನ್ನೂ ಬಿಡುಗಡೆಯ ಭಾಗ್ಯವಿಲ್ಲ. ಹೈಕೋರ್ಟ್ ನಲ್ಲಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.


ತನಿಖಾ ತಂಡದ ವಿವರಗಳನ್ನು ಅಧ್ಯಯನ ಮಾಡಿದ ಹೈಕೋರ್ಟ್ ಮೇಲ್ನೋಟಕ್ಕೆ ದಿಲೀಪ್ ಮೇಲಿನ ಆರೋಪ ನಿಜವೆಂಬುದಕ್ಕೆ ಪುಷ್ಠಿ ಸಿಗುತ್ತಿದೆ. ಇನ್ನೂ ಹೆಚ್ಚಿನ ಸಾಕ್ಷ್ಯಗಳ ವಿಚಾರಣೆ, ತನಿಖೆ ಪೂರ್ಣಗೊಳ್ಳುವವರೆಗೆ ಜಾಮೀನು ಸಾಧ್ಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಇದೇ ವೇಳೆ ಘಟನೆಗೆ ಮುಖ್ಯ ಸಾಕ್ಷಿಯಾಗಿದ್ದ ಮೆಮೊರಿಕಾರ್ಡ್, ಮೊಬೈಲ್ ಫೋನ್ ಆರೋಪಿ ದಿಲೀಪ್ ಕೈವಶದಲ್ಲಿದೆ ಎಂಬ ತನಿಖಾ ತಂಡದ ವರದಿ ಸತ್ಯವಾದರೆ, ಈಗ ಆರೋಪಿಯನ್ನು ಹೊರಬಿಡುವುದರಿಂದ ಈ ಪ್ರಮುಖ ಸಾಕ್ಷ್ಯಗಳು ನಾಶವಾಗುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಹಿನ್ನಲೆಯಲ್ಲಿ ದಿಲೀಪ್ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಲಿದ್ದಾರೆ. ಆದರೆ ನಾಳೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಮತ್ತೆ ದಿಲೀಪ್ ಪರ ವಕೀಲರು ಅಂಗಮಾಲಿ ನ್ಯಾಯಾಲಯದಲ್ಲಿ ಅಥವಾ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಇದನ್ನೂ ಓದಿ..  ವಿಶ್ವಕಪ್ ಸೋಲಿನ ನಂತರ ನಿವೃತ್ತಿಯಾಗ್ತಾರಾ ಮಿಥಾಲಿ ರಾಜ್? 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ