Webdunia - Bharat's app for daily news and videos

Install App

ಮದುವೆಗೆ ಮುಂಚೆನೇ ಈ ಕೆಲಸ ಮಾಡಿದ ಡಾಲಿ ಧನಂಜಯ್: ಏನದು

Sampriya
ಶನಿವಾರ, 4 ಜನವರಿ 2025 (15:29 IST)
Photo Courtesy X
ಬೆಂಗಳೂರು: ನಟ ಡಾಲಿ ಧನಂಜಯ್ ಮುಂದಿನ ತಿಂಗಳು ವೈದ್ಯೆ ಧನ್ಯತಾ ಜೊತೆ ವಿವಾಹವಾಗುತ್ತಿದ್ದಾರೆ. ಮದುವೆಗೆ ಮುಂಚೆ ಧನಂಜಯ್‌ ಅವರು ಸಾಮಾಜಿಕ ಕಾರ್ಯವೊಂದನ್ನು ಕೈಗೆತ್ತಿಕೊಂಡಿದ್ದಾರೆ.

ಧನಂಜಯ್ ಹುಟ್ಟೂರಿನಲ್ಲಿದ್ದ ಸರ್ಕಾರಿ ಶಾಲೆ ಕುಸಿಯುವ ಭೀತಿಯಲ್ಲಿತ್ತು. ಗೋಡೆಗಳು ಬಿರುಕು ಬಿಟ್ಟಿದ್ದವು, ಛಾವಣಿ ಸೋರುತ್ತಿತ್ತು, ನೆಲ ಹಾಸು ಕಿತ್ತೇ ಹೋಗಿತ್ತು. ಇನ್ನೂ ಕೆಲವು ಸಮಸ್ಯೆಗಳು ಶಾಲೆಯಲ್ಲಿದ್ದವು. ಇದೀಗ ಡಾಲಿ ಧನಂಜಯ್ ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಯನ್ನು ನವೀಕರಣ ಮಾಡುತ್ತಿದ್ದಾರೆ.

ಡಾಲಿ ಧನಂಜಯ್ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ 1 ರಿಂದ 7 ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆ ಶಿಥಿಲಗೊಂಡಿತ್ತು. ಇದನ್ನು ಗಮನಿಸಿದ ಡಾಲಿ ಧನಂಜಯ್ ಇಡೀ ಶಾಲೆಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ.

ಶಾಲೆಯ ಶಿಥಿಲಗೊಂಡಿದ್ದ ಗೋಡೆ ಮತ್ತು ತಾರಸಿ ದುರಸ್ತಿ ಮಾಡಿಸುತ್ತಿದ್ದಾರೆ. ಶಿಥಿಲವಾಗಿದ್ದ ನೆಲ ಹಾಸನ್ನು ತೆಗೆಸಿ ಹೊಸ ಟೈಲ್ಸ್ ಹಾಕಿಸುತ್ತಿದ್ದಾರೆ. ಶಿಕ್ಷಕರ ಕೊಠಡಿಯನ್ನು ನವೀಕರಣಗೊಳಿಸುತ್ತಿದ್ದಾರೆ. ಗೇಟ್ ದುರಸ್ತಿ, ಕಾಂಪೌಂಡ್ ದುರಸ್ತಿ, ಇಡೀ ಶಾಲೆಗೆ ಬಣ್ಣ, ಶೌಚಾಲಯ ನವೀಕರಣ, ಹೊಸ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್, ಸುಸಜ್ಜಿತ ಅಡುಗೆ ಮನೆ ಇನ್ನಿತರೆಗಳನ್ನು ಡಾಲಿ ಧನಂಜಯ್ ಮಾಡಿಸಿಕೊಡುತ್ತಿದ್ದಾರೆ.

ಡಾಲಿ ಧನಂಜಯ್ ಖುದ್ದಾಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಡನೆ, ಶಾಲೆಯ ಎಸ್​ಡಿಎಂಸಿ ಸದಸ್ಯರೊಡನೆ ಮಾತನಾಡಿದ್ದು, ಶಾಲೆಗೆ ಅಗತ್ಯವಾದ ನವೀಕರಣ ಮಾಡಿಸುತ್ತಿದ್ದಾರೆ. ದುರಸ್ತಿ ಹಾಗೂ ಮರುನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದ್ದು, ಕೆಲವೇ ವಾರಗಳಲ್ಲಿ ಶಾಲೆಗೆ ಹೊಸ ರೂಪ ಸಿಗಲಿದೆ. ಡಾಲಿ ಧನಂಜಯ್ ಮಾಡುತ್ತಿರುವ ಈ ಸಾಮಾಜಿಕ ಕಾರ್ಯಕ್ಕೆ ಊರಿನವರಿಂದ ಮತ್ತು ಅಭಿಮಾನಿಗಳಿಂದ ಪ್ರಶಂಸೆ ದೊರೆತಿದೆ.

ಡಾಲಿ ಧನಂಜಯ್  ಮದುವೆ ಫೆಬ್ರವರಿ 16 ರಂದು ವೈದ್ಯೆ ಧನ್ಯತಾ ಜೊತೆಗೆ ಮೈಸೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ದೀಪಿಕಾ ಪಡುಕೋಣೆಗೆ 2026ರ ಹಾಲಿವುಡ್ ವಾಕ್ ಆಫ್‌ ಫೇಮ್ ಗೌರವ, ಆದರೆ ಈಕೆಯೇ ಮೊದಲ ಭಾರತೀಯಳಲ್ಲ

ಅತೀಯಾದ ಮಾದಕ ವಸ್ತು ಸೇವನೆಯೇ ವಯಸ್ಕ ಚಲನಚಿತ್ರ ತಾರೆ ಕೈಲಿ ಸಾವಿಗೆ ಕಾರಣವಾಯಿತೇ

ರಾಮಾಯಣ ಟೀಸರ್ ರಿಲೀಸ್: ರಾವಣನಾಗಿ ಯಶ್ ಲುಕ್ ಇಲ್ಲಿದೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments