Webdunia - Bharat's app for daily news and videos

Install App

ಸರ್ಕಾರದ ಈ ದಿಟ್ಟ ಹೆಜ್ಜೆಗೆ ನಟ ದುನಿಯಾ ವಿಜಯ್ ಫುಲ್ ಖುಷ್

Sampriya
ಗುರುವಾರ, 19 ಸೆಪ್ಟಂಬರ್ 2024 (16:08 IST)
Photo Courtesy X
ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದ್ದಕ್ಕೆ ನಟ ದುನಿಯಾ ವಿಜಯ್ ಸಂತಸ ವ್ಯಕ್ತಪಡಿಸಿದ್ದಾರೆ.

ದುನಿಯಾ ವಿಜಯ್ ಅಭಿನಯದ ಭೀಮ ಸಿನಿಮಾದಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ಅರಿವು ಮೂಡಿಸಲಾಗಿತ್ತು. ಅದಲ್ಲದೆ ವಿಜಯ್ ಅವರು ಈಚೆಗೆ  ಮೆಡಿಕಲ್ ಶಾಪ್‌ಗಳಲ್ಲಿ ಅಕ್ರಮವಾಗಿ ನೀಡುವ ಮತ್ತೇರಿಸುವ ಮಾತ್ರೆಗಳ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಿದ್ದರು. ಬೆಂಗಳೂರಿನ ಹೊರವಲಯದಲ್ಲೂ ಈ ಮಾತ್ರೆಗಳ ಜಾಲ ಹಬ್ಬಿದ್ದು, ಪೊಲೀಸರ ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡ್ರಗ್ಸ್‌ ತಡೆಗಟ್ಟಲು ದಿಟ್ಟ ಹೆಜ್ಜೆಯಿಟ್ಟಿದೆ. ಅದರ ಅನುಸಾರ ಸಿಎಂ ಸಿದ್ದರಾಮಯ್ಯ ಅವರು ಟಾಸ್ಕ್‌ಪೋರ್ಸ್ ಸಮಿತಿ ರಚಿಸಿದ್ದು ಅದರ ಅಧ್ಯಕ್ಷರನ್ನಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ.

ಈ ಸಂಬಂಧ ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಹಾಗೂ ಯುವಕರ ಬದುಕನ್ನ ಉಳಿಸಲು ಮತ್ತು ಡ್ರಗ್ಸ್, ಗಾಂಜ ಮತ್ತಿತರೆ ವ್ಯಸನಕ್ಕೆ ಒಳಾಗಾಗುವದನ್ನ ತಡೆಗಟ್ಟಲು ಮಹತ್ತರ ಕಾರ್ಯಕ್ಕೆ ನಿಂತಿರುವ ಸರ್ಕಾರಕ್ಕೆ. ಪೊಲೀಸ್ ಇಲಾಖೆಗೆ ಹಾಗು ಮಾಧ್ಯಮ ಮಿತ್ರರಿಗೇ ಧನ್ಯವಾದಗಳು. @siddaramaiah
 @DrParameshwara ಎಂದು ವಿಜಯ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments