Webdunia - Bharat's app for daily news and videos

Install App

ನಟ ದುನಿಯಾ ವಿಜಯ್, ಮಾರುತಿ ಗೌಡ ಮೇಲೆ ಹಲ್ಲೆ ನಡೆಸಲು ಅಸಲಿ ಕಾರಣ ಬಹಿರಂಗ

Webdunia
ಗುರುವಾರ, 4 ಅಕ್ಟೋಬರ್ 2018 (12:08 IST)
ಬೆಂಗಳೂರು : ನಟ ದುನಿಯಾ ವಿಜಯ್ ಜಿಮ್ ತರಬೇತುದಾರ ಮಾರುತಿ ಗೌಡ ಅವರ  ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ.


ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ನಟ ದುನಿಯಾ ವಿಜಯ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಲು ಅಸಲಿ ಕಾರಣ ಏನೆಂಬುದು ತಿಳಿದುಬಂದಿದೆ. ದುನಿಯಾ ವಿಜಯ್ ಅಭಿನಯದ, ಸುಂದರ ಗೌಡ ನಿರ್ಮಾಣದ 'ಮಾಸ್ತಿಗುಡಿ' ಸಿನೆಮಾಕ್ಕೆ ಪಾನಿಪುರಿ ಕಿಟ್ಟಿ, ತಮ್ಮ ಸ್ನೇಹಿತರಾದ ಅನಿಲ್ ಹಾಗೂ ಉದಯ್ ಅವರ ಮೂಲಕ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದ್ದರೆಂದು ಹೇಳಲಾಗಿದೆ. ಮಾಸ್ತಿಗುಡಿ ಚಿತ್ರೀಕರಣದ ಸಂದರ್ಭದಲ್ಲಿ ಅನಿಲ್ ಹಾಗೂ ಉದಯ್ ದುರಂತ ಸಾವನ್ನಪ್ಪಿದ್ದು, ಮಾಸ್ತಿಗುಡಿ ಬಿಡುಗಡೆಯಾದ ಬಳಿಕ ಪಾನಿಪುರಿ ಕಿಟ್ಟಿ, ತಾವು ಹೂಡಿಕೆ ಮಾಡಿದ್ದ ಹಣ ಮರಳಿಸುವಂತೆ ದುನಿಯಾ ವಿಜಯ್ ಹಾಗೂ ಸುಂದರ್ ಗೌಡ ಅವರ ಬಳಿ ಕೇಳಿದ್ದರಂತೆ.


ಪಾನಿಪುರಿ ಕಿಟ್ಟಿ ಹಣ ಕೇಳಿದ ಸಂದರ್ಭದಲ್ಲಿ, ಮಾಸ್ತಿಗುಡಿ ಚಿತ್ರ ನಿರೀಕ್ಷಿತ ಯಶಸ್ಸು ಕಾಣದ ಕಾರಣ ಕೆಲ ಕಾಲದ ಬಳಿಕ ಹಣ ನೀಡುವುದಾಗಿ ಹೇಳಿದ್ದ ದುನಿಯಾ ವಿಜಯ್ ಹಾಗೂ ಸುಂದರ ಗೌಡ ಆ ನಂತರ ಮಾತು ಬದಲಿಸಿದ್ದರಿಂದ ಇವರ ನಡುವೆ ವಾಗ್ವಾದ ನಡೆದು ನಂತರ ಅದು ತಾರಕಕ್ಕೇರಿ ಹಲ್ಲೆ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments